ಸುದ್ದಿಗಳು

#Ayodhya| ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆಗೆ ಶೀಘ್ರ ದಿನ‌ ನಿಗದಿ – ಪೇಜಾವರ ಶ್ರೀ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಯೋಧ್ಯೆ ರಾಮ ಮಂದಿರದ ಪ್ರತಿಷ್ಠಾಪನೆಗೆ ದೇಶ – ವಿದೇಶಗಳ ಜನರು ಕಾತುರದಿಂದ ಕಾಯುತ್ತಿದ್ದಾರೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ರಾಮ ಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮನ ಬಾಲರೂಪದ ವಿಗ್ರಹವನ್ನು ಪ್ರತಿಷ್ಠಾಪಿಸಲು ಸಿದ್ಧತೆಗಳು ಭರದಿಂದ ಸಾಗುತ್ತಿದೆ.

ಜನವರಿ ತಿಂಗಳ ಅಂತ್ಯದೊಳಗೆ, ಮಕರ ಸಂಕ್ರಮಣ ಕಳೆದ ಬಳಿಕ ವಾರದೊಳಗೆ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ನಡೆಯಲಿದೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ಸಮಿತಿಯ ಸದಸ್ಯ, ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. ಮಕರ ಸಂಕ್ರಾಂತಿ ಕಳೆದು ಒಂದು ವಾರದೊಳಗೆ ಅಂದರೆ ಜನವರಿ ತಿಂಗಳ ಅಂತ್ಯದೊಳಗೆ ಶ್ರೀರಾಮ ಮಂದಿರದ ಉದ್ಘಾಟನೆ ನಡೆಯಲಿದೆ. ಬಗ್ಗೆ ಉದ್ಘಾಟನೆ ದಿನ ಶೀಘ್ರದಲ್ಲೇ ನಿಗದಿಯಾಗಲಿದೆ ಎಂದು ಅವರು ತಿಳಿಸಿದರು.

Advertisement
Advertisement
ರಾಮರಾಜ್ಯದ ಕನಸು ನನಸು ಮಾಡುವುದೇ ಸೇವೆ

ಅಯೋಧ್ಯೆ ಶ್ರೀರಾಮ ಮಂದಿರ ದಲ್ಲಿ ಇತರ ದೇವಸ್ಥಾನಗಳಂತೆ ಸೇವೆಯ ಪಟ್ಟಿ ಇರುವುದಿಲ್ಲ ‌. ಸಾಮಾನ್ಯವಾಗಿ ಭಕ್ತರು ದೇವಸ್ಥಾನಗಳಿಗೆ ಹೋದಾಗ ಅಲ್ಲಿನ ಸೇವೆಯ ಪಟ್ಟಿಯನ್ನು ನೋಡಿ ದೇವಸ್ಥಾನದಲ್ಲಿ ಸೇವೆ ನೀಡುತ್ತಾರೆ. ಆದರೆ ಈ ರೀತಿಯ ವ್ಯವಸ್ಥೆ ಅಯೋಧ್ಯೆ ಶ್ರೀ ರಾಮ ಮಂದಿರ ದಲ್ಲಿ ಇರುವುದಿಲ್ಲ. ದೇವರಿಗೆ ಕಾಣಿಕೆ ಸಮರ್ಪಿಸುವವರು ರಾಮ ರಾಜ್ಯದ ಕನಸು ನನಸು ಗೊಳಿಸಲು ನೀಡುವ ಕಾಣಿಕೆ ಆಗಿದೆ. ಬದುಕಿನಲ್ಲಿ ಒಬ್ಬನಿಗೆ ಹತ್ತು ಲಕ್ಷ ರೂ ಖರ್ಚು ಮಾಡುವ ಸಾಮರ್ಥ್ಯ ಇದ್ದರೆ, ವಾಸಕ್ಕೆ ಮನೆ ಇಲ್ಲದವನಿಗೆ ಮನೆ ನಿರ್ಮಾಣ‌ ಮಾಡಿ ಕೊಡುವುದು, ಆರೋಗ್ಯ ಶಿಕ್ಷಣದಂತಹ ಕೊಡುಗೆಗಳನ್ನು ಆತನ ಸಂಪತ್ತಿಗೆ ತಕ್ಕಂತೆ ನೀಡಿ ರಾಮ ರಾಜ್ಯದ ಕನಸು ನನಸು ಮಾಡಿದರೆ ಅದುವೆ ನೀಡುವ ಸೇವೆ ಆಗಿದೆ ಎಂದು ತಿಳಿಸಿದರು.

ಶ್ರೀ ರಾಮ ಮಂದಿರದಲ್ಲಿ ಯಾವುದೇ ಸೇವೆಯು ಭಕ್ತರಿಗೆ ಇರದೆ ಇದ್ದರೂ ಭಕ್ತರೂ ತಮ್ಮ ಇಷ್ಟಾನುಸಾರ ಕಾಣಿಕೆಗಳನ್ನು ಕಾಣಿಕೆ ಡಬ್ಬಿಗೆ ಹಾಕಬಹುದು ಎಂದರು. ಶ್ರೀ ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಪಕ್ಷಗಳು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಅದಕ್ಕೂ ನನಗೂ ಸಂಬಂಧ ಇಲ್ಲ. ರಾಮ ಸೇವೆ ಮಾಡುವುದೆ ದೇಶ ಸೇವೆ. ಯಾರೂ ಏನೂ ಬೇಕಾದರೂ ಮಾಡಲಿ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

5 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

6 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

7 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

8 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago