Advertisement
ಸುದ್ದಿಗಳು

#Ayodhya| ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆಗೆ ಶೀಘ್ರ ದಿನ‌ ನಿಗದಿ – ಪೇಜಾವರ ಶ್ರೀ

Share

ಅಯೋಧ್ಯೆ ರಾಮ ಮಂದಿರದ ಪ್ರತಿಷ್ಠಾಪನೆಗೆ ದೇಶ – ವಿದೇಶಗಳ ಜನರು ಕಾತುರದಿಂದ ಕಾಯುತ್ತಿದ್ದಾರೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ರಾಮ ಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮನ ಬಾಲರೂಪದ ವಿಗ್ರಹವನ್ನು ಪ್ರತಿಷ್ಠಾಪಿಸಲು ಸಿದ್ಧತೆಗಳು ಭರದಿಂದ ಸಾಗುತ್ತಿದೆ.

ಜನವರಿ ತಿಂಗಳ ಅಂತ್ಯದೊಳಗೆ, ಮಕರ ಸಂಕ್ರಮಣ ಕಳೆದ ಬಳಿಕ ವಾರದೊಳಗೆ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ನಡೆಯಲಿದೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ಸಮಿತಿಯ ಸದಸ್ಯ, ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. ಮಕರ ಸಂಕ್ರಾಂತಿ ಕಳೆದು ಒಂದು ವಾರದೊಳಗೆ ಅಂದರೆ ಜನವರಿ ತಿಂಗಳ ಅಂತ್ಯದೊಳಗೆ ಶ್ರೀರಾಮ ಮಂದಿರದ ಉದ್ಘಾಟನೆ ನಡೆಯಲಿದೆ. ಬಗ್ಗೆ ಉದ್ಘಾಟನೆ ದಿನ ಶೀಘ್ರದಲ್ಲೇ ನಿಗದಿಯಾಗಲಿದೆ ಎಂದು ಅವರು ತಿಳಿಸಿದರು.

ರಾಮರಾಜ್ಯದ ಕನಸು ನನಸು ಮಾಡುವುದೇ ಸೇವೆ

ಅಯೋಧ್ಯೆ ಶ್ರೀರಾಮ ಮಂದಿರ ದಲ್ಲಿ ಇತರ ದೇವಸ್ಥಾನಗಳಂತೆ ಸೇವೆಯ ಪಟ್ಟಿ ಇರುವುದಿಲ್ಲ ‌. ಸಾಮಾನ್ಯವಾಗಿ ಭಕ್ತರು ದೇವಸ್ಥಾನಗಳಿಗೆ ಹೋದಾಗ ಅಲ್ಲಿನ ಸೇವೆಯ ಪಟ್ಟಿಯನ್ನು ನೋಡಿ ದೇವಸ್ಥಾನದಲ್ಲಿ ಸೇವೆ ನೀಡುತ್ತಾರೆ. ಆದರೆ ಈ ರೀತಿಯ ವ್ಯವಸ್ಥೆ ಅಯೋಧ್ಯೆ ಶ್ರೀ ರಾಮ ಮಂದಿರ ದಲ್ಲಿ ಇರುವುದಿಲ್ಲ. ದೇವರಿಗೆ ಕಾಣಿಕೆ ಸಮರ್ಪಿಸುವವರು ರಾಮ ರಾಜ್ಯದ ಕನಸು ನನಸು ಗೊಳಿಸಲು ನೀಡುವ ಕಾಣಿಕೆ ಆಗಿದೆ. ಬದುಕಿನಲ್ಲಿ ಒಬ್ಬನಿಗೆ ಹತ್ತು ಲಕ್ಷ ರೂ ಖರ್ಚು ಮಾಡುವ ಸಾಮರ್ಥ್ಯ ಇದ್ದರೆ, ವಾಸಕ್ಕೆ ಮನೆ ಇಲ್ಲದವನಿಗೆ ಮನೆ ನಿರ್ಮಾಣ‌ ಮಾಡಿ ಕೊಡುವುದು, ಆರೋಗ್ಯ ಶಿಕ್ಷಣದಂತಹ ಕೊಡುಗೆಗಳನ್ನು ಆತನ ಸಂಪತ್ತಿಗೆ ತಕ್ಕಂತೆ ನೀಡಿ ರಾಮ ರಾಜ್ಯದ ಕನಸು ನನಸು ಮಾಡಿದರೆ ಅದುವೆ ನೀಡುವ ಸೇವೆ ಆಗಿದೆ ಎಂದು ತಿಳಿಸಿದರು.

ಶ್ರೀ ರಾಮ ಮಂದಿರದಲ್ಲಿ ಯಾವುದೇ ಸೇವೆಯು ಭಕ್ತರಿಗೆ ಇರದೆ ಇದ್ದರೂ ಭಕ್ತರೂ ತಮ್ಮ ಇಷ್ಟಾನುಸಾರ ಕಾಣಿಕೆಗಳನ್ನು ಕಾಣಿಕೆ ಡಬ್ಬಿಗೆ ಹಾಕಬಹುದು ಎಂದರು. ಶ್ರೀ ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಪಕ್ಷಗಳು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಅದಕ್ಕೂ ನನಗೂ ಸಂಬಂಧ ಇಲ್ಲ. ರಾಮ ಸೇವೆ ಮಾಡುವುದೆ ದೇಶ ಸೇವೆ. ಯಾರೂ ಏನೂ ಬೇಕಾದರೂ ಮಾಡಲಿ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

5 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

20 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

21 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago