Advertisement
ಸುದ್ದಿಗಳು

#Ayodhya| ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆಗೆ ಶೀಘ್ರ ದಿನ‌ ನಿಗದಿ – ಪೇಜಾವರ ಶ್ರೀ

Share

ಅಯೋಧ್ಯೆ ರಾಮ ಮಂದಿರದ ಪ್ರತಿಷ್ಠಾಪನೆಗೆ ದೇಶ – ವಿದೇಶಗಳ ಜನರು ಕಾತುರದಿಂದ ಕಾಯುತ್ತಿದ್ದಾರೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ರಾಮ ಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮನ ಬಾಲರೂಪದ ವಿಗ್ರಹವನ್ನು ಪ್ರತಿಷ್ಠಾಪಿಸಲು ಸಿದ್ಧತೆಗಳು ಭರದಿಂದ ಸಾಗುತ್ತಿದೆ.

ಜನವರಿ ತಿಂಗಳ ಅಂತ್ಯದೊಳಗೆ, ಮಕರ ಸಂಕ್ರಮಣ ಕಳೆದ ಬಳಿಕ ವಾರದೊಳಗೆ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ನಡೆಯಲಿದೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ಸಮಿತಿಯ ಸದಸ್ಯ, ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. ಮಕರ ಸಂಕ್ರಾಂತಿ ಕಳೆದು ಒಂದು ವಾರದೊಳಗೆ ಅಂದರೆ ಜನವರಿ ತಿಂಗಳ ಅಂತ್ಯದೊಳಗೆ ಶ್ರೀರಾಮ ಮಂದಿರದ ಉದ್ಘಾಟನೆ ನಡೆಯಲಿದೆ. ಬಗ್ಗೆ ಉದ್ಘಾಟನೆ ದಿನ ಶೀಘ್ರದಲ್ಲೇ ನಿಗದಿಯಾಗಲಿದೆ ಎಂದು ಅವರು ತಿಳಿಸಿದರು.

ರಾಮರಾಜ್ಯದ ಕನಸು ನನಸು ಮಾಡುವುದೇ ಸೇವೆ

ಅಯೋಧ್ಯೆ ಶ್ರೀರಾಮ ಮಂದಿರ ದಲ್ಲಿ ಇತರ ದೇವಸ್ಥಾನಗಳಂತೆ ಸೇವೆಯ ಪಟ್ಟಿ ಇರುವುದಿಲ್ಲ ‌. ಸಾಮಾನ್ಯವಾಗಿ ಭಕ್ತರು ದೇವಸ್ಥಾನಗಳಿಗೆ ಹೋದಾಗ ಅಲ್ಲಿನ ಸೇವೆಯ ಪಟ್ಟಿಯನ್ನು ನೋಡಿ ದೇವಸ್ಥಾನದಲ್ಲಿ ಸೇವೆ ನೀಡುತ್ತಾರೆ. ಆದರೆ ಈ ರೀತಿಯ ವ್ಯವಸ್ಥೆ ಅಯೋಧ್ಯೆ ಶ್ರೀ ರಾಮ ಮಂದಿರ ದಲ್ಲಿ ಇರುವುದಿಲ್ಲ. ದೇವರಿಗೆ ಕಾಣಿಕೆ ಸಮರ್ಪಿಸುವವರು ರಾಮ ರಾಜ್ಯದ ಕನಸು ನನಸು ಗೊಳಿಸಲು ನೀಡುವ ಕಾಣಿಕೆ ಆಗಿದೆ. ಬದುಕಿನಲ್ಲಿ ಒಬ್ಬನಿಗೆ ಹತ್ತು ಲಕ್ಷ ರೂ ಖರ್ಚು ಮಾಡುವ ಸಾಮರ್ಥ್ಯ ಇದ್ದರೆ, ವಾಸಕ್ಕೆ ಮನೆ ಇಲ್ಲದವನಿಗೆ ಮನೆ ನಿರ್ಮಾಣ‌ ಮಾಡಿ ಕೊಡುವುದು, ಆರೋಗ್ಯ ಶಿಕ್ಷಣದಂತಹ ಕೊಡುಗೆಗಳನ್ನು ಆತನ ಸಂಪತ್ತಿಗೆ ತಕ್ಕಂತೆ ನೀಡಿ ರಾಮ ರಾಜ್ಯದ ಕನಸು ನನಸು ಮಾಡಿದರೆ ಅದುವೆ ನೀಡುವ ಸೇವೆ ಆಗಿದೆ ಎಂದು ತಿಳಿಸಿದರು.

ಶ್ರೀ ರಾಮ ಮಂದಿರದಲ್ಲಿ ಯಾವುದೇ ಸೇವೆಯು ಭಕ್ತರಿಗೆ ಇರದೆ ಇದ್ದರೂ ಭಕ್ತರೂ ತಮ್ಮ ಇಷ್ಟಾನುಸಾರ ಕಾಣಿಕೆಗಳನ್ನು ಕಾಣಿಕೆ ಡಬ್ಬಿಗೆ ಹಾಕಬಹುದು ಎಂದರು. ಶ್ರೀ ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಪಕ್ಷಗಳು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಅದಕ್ಕೂ ನನಗೂ ಸಂಬಂಧ ಇಲ್ಲ. ರಾಮ ಸೇವೆ ಮಾಡುವುದೆ ದೇಶ ಸೇವೆ. ಯಾರೂ ಏನೂ ಬೇಕಾದರೂ ಮಾಡಲಿ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 hour ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 hour ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

12 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

12 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

12 hours ago