Advertisement
ಕಲೆ-ಸಂಸ್ಕೃತಿ

#MysoreDasara | ಸಂಗೀತ ನಾದಬ್ರಹ್ಮ ಹಂಸಲೇಖರಿಂದ ಮೈಸೂರು ದಸರಾ ಉದ್ಘಾಟನೆ | ಸಿಎಂ ಸಿದ್ದರಾಮಯ್ಯ ಘೋಷಣೆ |

Share

ನಾಡಹಬ್ಬ ದಸರಾಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗಾಗಲೇ ತಯಾರಿ ಜೋರಾಗೆ ನಡೆಯುತ್ತಿದೆ. ಪ್ರತೀ ದಸರಾಕ್ಕೆ  ದಸರಾ ಉದ್ಘಾಟನೆಯ ಗಣ್ಯ ವ್ಯಕ್ತಿ ಯಾರೋ ಅನ್ನೋ ಬಗ್ಗೆ ಕುತೂಹಲ ಇರುತ್ತದೆ. ಈ ಬಾರಿಯ ಮೈಸೂರು #Mysuru ದಸರಾವನ್ನುಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ #Hamsalekha ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಸಾರ ಅಕ್ಟೋಬರ್​ 15 ರ ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಲಿದೆ.

ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ. ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್​ಹೌಸ್ ವೃತ್ತ, ಎಲ್​ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ ಮಾಡಲಾಗುತ್ತೆ. ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ.

ಮೈಸೂರು ದಸರಾ ಹಬ್ಬಕ್ಕೆ ಈಗಿನಿಂದಲೇ ಗಜಪಡೆಯ ತಾಲೀಮು ಆರಂಭವಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಂಪುರ ಆನೆ ಶಿಬಿರದಿಂದ ದಸರಾ ಜಂಬೂ ಸವಾರಿಗೆ ಎರಡು ಆನೆಗಳು ಆಯ್ಕೆಯಾಗಿವೆ.  ಆನೆ ಶಿಬಿರದಲ್ಲಿ ಪಾರ್ಥಸಾರಥಿ ಮತ್ತು ಕಲ್ಪನಾ ಎರಡು ಆನೆಗಳಿಗೆ ತಾಲೀಮು ನೀಡಲಾಗುತ್ತಿದೆ. ವಾಹನಗಳ ಶಬ್ದಗಳಿಗೆ ಹೆದರಬಾರದೆಂದು ಪ್ರತಿನಿತ್ಯ ಗುಂಡ್ಲುಪೇಟೆ, ಕೇರಳ ಹೆದ್ದಾರಿಯಲ್ಲಿ ಆನೆಗಳು ಪ್ರತಿದಿನ 10 ಕಿ.ಮೀ ಸಂಚಾರ ಮಾಡುತ್ತಿವೆ.  ರಾಂಪುರ ಆನೆ ಶಿಬಿರದಿಂದ ಮೂಲೆಹೊಳೆ ಚೆಕ್ ಪೋಸ್ಟ್ ವರೆಗೂ ನಿತ್ಯ ತಾಲೀಮು ನೀಡಲಾಗುತ್ತಿದೆ.

ಏರ್ ಶೋ ಆಯೋಜನಗೆ ಚಿಂತನೆ : ಪ್ರಸಕ್ತ ವರ್ಷ ದಸರಾ ಅಂಗವಾಗಿ ಏರ್ ಶೋ ಆಯೋಜಿಸಲು ಚಿಂತನೆ ಇದೆ.  ಈ ವಿಚಾರವಾಗಿ ರಕ್ಷಣಾ ಸಚಿವರ ಜೊತೆ ಚರ್ಚೆ ಮಾಡುತ್ತೇವೆ. ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ದಸರಾ ವೇಳೆ ಏರ್ ಶೋ ಆಯೋಜಿಸಿದ್ದೆವು. ಮೈಸೂರು ದಸರಾ ಮಹೋತ್ಸವದಲ್ಲಿ ಅನಗತ್ಯ ಖರ್ಚು ಇರಬಾರದು. ಶಕ್ತಿ ಯೋಜನೆ ಜಾರಿಯಾಗಿರುವ ಕಾರಣ ಮಹಿಳೆಯರು ಹೆಚ್ಚು ಬರುವ ಸಾಧ್ಯತೆ ಇದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

5 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

5 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

21 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago