Advertisement
ಕಲೆ-ಸಂಸ್ಕೃತಿ

#MysoreDasara | ಸಂಗೀತ ನಾದಬ್ರಹ್ಮ ಹಂಸಲೇಖರಿಂದ ಮೈಸೂರು ದಸರಾ ಉದ್ಘಾಟನೆ | ಸಿಎಂ ಸಿದ್ದರಾಮಯ್ಯ ಘೋಷಣೆ |

Share

ನಾಡಹಬ್ಬ ದಸರಾಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗಾಗಲೇ ತಯಾರಿ ಜೋರಾಗೆ ನಡೆಯುತ್ತಿದೆ. ಪ್ರತೀ ದಸರಾಕ್ಕೆ  ದಸರಾ ಉದ್ಘಾಟನೆಯ ಗಣ್ಯ ವ್ಯಕ್ತಿ ಯಾರೋ ಅನ್ನೋ ಬಗ್ಗೆ ಕುತೂಹಲ ಇರುತ್ತದೆ. ಈ ಬಾರಿಯ ಮೈಸೂರು #Mysuru ದಸರಾವನ್ನುಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ #Hamsalekha ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಸಾರ ಅಕ್ಟೋಬರ್​ 15 ರ ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಲಿದೆ.

Advertisement

ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ. ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್​ಹೌಸ್ ವೃತ್ತ, ಎಲ್​ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ ಮಾಡಲಾಗುತ್ತೆ. ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ.

ಮೈಸೂರು ದಸರಾ ಹಬ್ಬಕ್ಕೆ ಈಗಿನಿಂದಲೇ ಗಜಪಡೆಯ ತಾಲೀಮು ಆರಂಭವಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಂಪುರ ಆನೆ ಶಿಬಿರದಿಂದ ದಸರಾ ಜಂಬೂ ಸವಾರಿಗೆ ಎರಡು ಆನೆಗಳು ಆಯ್ಕೆಯಾಗಿವೆ.  ಆನೆ ಶಿಬಿರದಲ್ಲಿ ಪಾರ್ಥಸಾರಥಿ ಮತ್ತು ಕಲ್ಪನಾ ಎರಡು ಆನೆಗಳಿಗೆ ತಾಲೀಮು ನೀಡಲಾಗುತ್ತಿದೆ. ವಾಹನಗಳ ಶಬ್ದಗಳಿಗೆ ಹೆದರಬಾರದೆಂದು ಪ್ರತಿನಿತ್ಯ ಗುಂಡ್ಲುಪೇಟೆ, ಕೇರಳ ಹೆದ್ದಾರಿಯಲ್ಲಿ ಆನೆಗಳು ಪ್ರತಿದಿನ 10 ಕಿ.ಮೀ ಸಂಚಾರ ಮಾಡುತ್ತಿವೆ.  ರಾಂಪುರ ಆನೆ ಶಿಬಿರದಿಂದ ಮೂಲೆಹೊಳೆ ಚೆಕ್ ಪೋಸ್ಟ್ ವರೆಗೂ ನಿತ್ಯ ತಾಲೀಮು ನೀಡಲಾಗುತ್ತಿದೆ.

ಏರ್ ಶೋ ಆಯೋಜನಗೆ ಚಿಂತನೆ : ಪ್ರಸಕ್ತ ವರ್ಷ ದಸರಾ ಅಂಗವಾಗಿ ಏರ್ ಶೋ ಆಯೋಜಿಸಲು ಚಿಂತನೆ ಇದೆ.  ಈ ವಿಚಾರವಾಗಿ ರಕ್ಷಣಾ ಸಚಿವರ ಜೊತೆ ಚರ್ಚೆ ಮಾಡುತ್ತೇವೆ. ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ದಸರಾ ವೇಳೆ ಏರ್ ಶೋ ಆಯೋಜಿಸಿದ್ದೆವು. ಮೈಸೂರು ದಸರಾ ಮಹೋತ್ಸವದಲ್ಲಿ ಅನಗತ್ಯ ಖರ್ಚು ಇರಬಾರದು. ಶಕ್ತಿ ಯೋಜನೆ ಜಾರಿಯಾಗಿರುವ ಕಾರಣ ಮಹಿಳೆಯರು ಹೆಚ್ಚು ಬರುವ ಸಾಧ್ಯತೆ ಇದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

14 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

14 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

14 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

14 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

14 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

14 hours ago