Advertisement
ಕಲೆ-ಸಂಸ್ಕೃತಿ

#MysoreDasara | ಸಂಗೀತ ನಾದಬ್ರಹ್ಮ ಹಂಸಲೇಖರಿಂದ ಮೈಸೂರು ದಸರಾ ಉದ್ಘಾಟನೆ | ಸಿಎಂ ಸಿದ್ದರಾಮಯ್ಯ ಘೋಷಣೆ |

Share

ನಾಡಹಬ್ಬ ದಸರಾಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗಾಗಲೇ ತಯಾರಿ ಜೋರಾಗೆ ನಡೆಯುತ್ತಿದೆ. ಪ್ರತೀ ದಸರಾಕ್ಕೆ  ದಸರಾ ಉದ್ಘಾಟನೆಯ ಗಣ್ಯ ವ್ಯಕ್ತಿ ಯಾರೋ ಅನ್ನೋ ಬಗ್ಗೆ ಕುತೂಹಲ ಇರುತ್ತದೆ. ಈ ಬಾರಿಯ ಮೈಸೂರು #Mysuru ದಸರಾವನ್ನುಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ #Hamsalekha ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಸಾರ ಅಕ್ಟೋಬರ್​ 15 ರ ಬೆಳಿಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಲಿದೆ.

ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ. ಮೈಸೂರಿನ 119 ವೃತ್ತಗಳಲ್ಲಿ ಅಂದರೇ ಬರೋಬ್ಬರಿ 135 ಕಿ.ಮೀ ರಸ್ತೆಗೆ ವಿದ್ಯುತ್ ದೀಪಾಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಕೆ.ಆರ್.ವೃತ್ತ, ಚಾಮರಾಜ ವೃತ್ತ, ರಾಮಸ್ವಾಮಿ ವೃತ್ತ, ಗನ್​ಹೌಸ್ ವೃತ್ತ, ಎಲ್​ಐಸಿ ವೃತ್ತ ಸೇರಿ ನಗರದ ಹಲವು ಕಡೆ ದೀಪಾಲಂಕಾರ ಮಾಡಲಾಗುತ್ತೆ. ಮೈಸೂರಿನ ಸರ್ಕಾರಿ ಕಟ್ಟಡಗಳಿಗೂ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ.

ಮೈಸೂರು ದಸರಾ ಹಬ್ಬಕ್ಕೆ ಈಗಿನಿಂದಲೇ ಗಜಪಡೆಯ ತಾಲೀಮು ಆರಂಭವಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಂಪುರ ಆನೆ ಶಿಬಿರದಿಂದ ದಸರಾ ಜಂಬೂ ಸವಾರಿಗೆ ಎರಡು ಆನೆಗಳು ಆಯ್ಕೆಯಾಗಿವೆ.  ಆನೆ ಶಿಬಿರದಲ್ಲಿ ಪಾರ್ಥಸಾರಥಿ ಮತ್ತು ಕಲ್ಪನಾ ಎರಡು ಆನೆಗಳಿಗೆ ತಾಲೀಮು ನೀಡಲಾಗುತ್ತಿದೆ. ವಾಹನಗಳ ಶಬ್ದಗಳಿಗೆ ಹೆದರಬಾರದೆಂದು ಪ್ರತಿನಿತ್ಯ ಗುಂಡ್ಲುಪೇಟೆ, ಕೇರಳ ಹೆದ್ದಾರಿಯಲ್ಲಿ ಆನೆಗಳು ಪ್ರತಿದಿನ 10 ಕಿ.ಮೀ ಸಂಚಾರ ಮಾಡುತ್ತಿವೆ.  ರಾಂಪುರ ಆನೆ ಶಿಬಿರದಿಂದ ಮೂಲೆಹೊಳೆ ಚೆಕ್ ಪೋಸ್ಟ್ ವರೆಗೂ ನಿತ್ಯ ತಾಲೀಮು ನೀಡಲಾಗುತ್ತಿದೆ.

ಏರ್ ಶೋ ಆಯೋಜನಗೆ ಚಿಂತನೆ : ಪ್ರಸಕ್ತ ವರ್ಷ ದಸರಾ ಅಂಗವಾಗಿ ಏರ್ ಶೋ ಆಯೋಜಿಸಲು ಚಿಂತನೆ ಇದೆ.  ಈ ವಿಚಾರವಾಗಿ ರಕ್ಷಣಾ ಸಚಿವರ ಜೊತೆ ಚರ್ಚೆ ಮಾಡುತ್ತೇವೆ. ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ದಸರಾ ವೇಳೆ ಏರ್ ಶೋ ಆಯೋಜಿಸಿದ್ದೆವು. ಮೈಸೂರು ದಸರಾ ಮಹೋತ್ಸವದಲ್ಲಿ ಅನಗತ್ಯ ಖರ್ಚು ಇರಬಾರದು. ಶಕ್ತಿ ಯೋಜನೆ ಜಾರಿಯಾಗಿರುವ ಕಾರಣ ಮಹಿಳೆಯರು ಹೆಚ್ಚು ಬರುವ ಸಾಧ್ಯತೆ ಇದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

3 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

8 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

9 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

11 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

12 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago