ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ರೂರಲ್ ಮಿರರ್ ಡಿಜಿಟಲ್ ಮೀಡಿಯಾ ಜಂಟಿ ಆಶ್ರಯದಲ್ಲಿ ಸಕಾರಾತ್ಮಕ ಪತ್ರಿಕೋದ್ಯಮದದ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಬುಧವಾರ ನಡೆಯಿತು. ತರಬೇತಿ ಕಾರ್ಯಕ್ರಮವನ್ನು ಕೃಷಿಕ ವೇಣುಗೋಪಾಲ ಶೇರ ಉದ್ಘಾಟಿಸಿದರು.
ಗ್ರಾಮೀಣ ಹಾಗೂ ಕೃಷಿ ಪತ್ರಿಕೋದ್ಯಮದ ಬೆಳವಣಿಗೆಯ ಜೊತೆಗೆ ಸಮಾಜದಲ್ಲಿರುವ ಒಳ್ಳೆಯ ಅಂಶಗಳ ಕಡೆಗೂ ಬೆಳಕು ಚೆಲ್ಲುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ರೂರಲ್ ಮಿರರ್ ಡಿಜಿಟಲ್ ಮೀಡಿಯಾ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಜೊತೆ ಜಂಟಿಯಾಗಿ ಒಂದು ವರ್ಷಗಳ ಕಾಲ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲಿದೆ. ಬ್ರೇಕಿಂಗ್ ನ್ಯೂಸ್ಗಳು, ಅಪರಾಧ ಸುದ್ದಿಗಳ ಜೊತೆಗೆ ಸಮಾಜದಲ್ಲಿ ಋಣಾತ್ಮಕ ಸಂಗತಿಗಳೇ ವೈಭವೀಕರಣವಾಗುತ್ತಿದೆ.
ಈ ನಡುವೆಯೇ ಸಮಾಜದಲ್ಲಿರುವ ಧನಾತ್ಮಕ ಅಂಶಗಳ ಕಡೆಗೂ ವಿದ್ಯಾರ್ಥಿಗಳು, ಪತ್ರಕರ್ತರು ಹೇಗೆ ಬೆಳಕು ಚೆಲ್ಲಬಹುದು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೇ ತರಬೇತಿಯ ಅವಶ್ಯಕತೆಯ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವರ್ಷಪೂರ್ತಿ 4 ಅಧ್ಯಾಯದ ಮೂಲಕ ವಿದ್ಯಾರ್ಥಿಗಳನ್ನು ತರಬೇತು ಮಾಡಲಾಗುತ್ತಿದೆ. ಸೋಶಿಯಲ್ ಮೀಡಿಯಾಗಳ ಬಳಕೆ, ಆಧುನಿನ ಮಾಧ್ಯಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಿಕೆ ಹೇಗೆ ಇತ್ಯಾದಿಗಳ ಸಹಿತ ತರಬೇತಿ ಇರುತ್ತದೆ.
ದ ರೂರಲ್ ಮಿರರ್ www.theruralmirror.com ಈಗಾಗಲೇ ಧನಾತ್ಮಕ ವಿಷಯಗಳ ಸುದ್ದಿಯ ಕಡೆಗೆ ಆದ್ಯತೆ ನೀಡುತ್ತಿದೆ. ಕೃಷಿ, ಗ್ರಾಮೀಣ, ಕೃಷಿ ಜಾಗೃತಿ ಸುದ್ದಿಗಳು, ಗ್ರಾಮೀಣ ಪ್ರದೇಶಗಳಿಗೆ ಸಂಬಂಧ ಇರುವ ಹಾಗೂ ಇತರ ಸುದ್ದಿಗಳನ್ನು ನೀಡುತ್ತದೆ. ಇದೇ ನೆಲೆಯಲ್ಲೂ ವಿದ್ಯಾರ್ಥಿಗಳನ್ನು ತರಬೇತುಗೊಳಿಸುವ ಉದ್ದೇಶವನ್ನು ಹೊಂದಿದೆ.
ಕಾರ್ಯಕ್ರಮ ಉದ್ಘಾಟಿಸಿದ ಕೃಷಿಕ ವೇಣುಗೋಪಾಲ ಶೇರ ಮಾತನಾಡಿದರು.(ಆಡಿಯೋ ಇಲ್ಲಿದೆ….)
ಈ ಕಾರ್ಯಕ್ರಮವನ್ನು ಕೃಷಿಕ ವೇಣುಗೋಪಾಲ ಶೇರ ಉದ್ಘಾಟಿಸಿ ಶುಭ ಹಾರೈಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಅಂಬಿಕಾ ಮಹಾವಿದ್ಯಾಲಯದ ಪ್ರಾಂಶುಪಾಲ ರಾಕೇಶ್ ಕುಮಾರ್ ಕಮ್ಮಜೆ, ಐಕ್ಯುಸಿ ಘಟಕದ ಸಂಯೋಜಕ ಚಂದ್ರಕಾಂತ ಗೋರೆ, ರೂರಲ್ ಮಿರರ್ ಡಿಜಿಟಲ್ ಮೀಡಿಯಾ ಮುಖ್ಯಸ್ಥ ಮಹೇಶ್ ಪುಚ್ಚಪ್ಪಾಡಿ ಉಪಸ್ಥಿತರಿದ್ದರು.
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…
ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490