Advertisement
MIRROR FOCUS

ಅಯೋಧ್ಯೆಯಲ್ಲಿ ಜ.22ರಂದು ರಾಮಮಂದಿರ ಉದ್ಘಾಟನೆ | 10 ಕೋಟಿ ಕುಟುಂಬಗಳಲ್ಲಿ ತಲುಪುವ ಗುರಿ | ಮನೆಗಳಲ್ಲಿ ದೀಪೋತ್ಸವ ಆಚರಣೆಗೆ ಮನವಿ |

Share

ನಾಡಿನ ಒಡೆಯ ಶ್ರೀ ರಾಮಚಂದ್ರ ನನ್ನು(Lord Rama) ಆತನ ಜನ್ಮಸ್ಥಳ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸುವ ದಿನೇ ಬಂದೇ ಬಿಟ್ಟಿದೆ. ಅಯೋಧ್ಯೆ(Ayodhya)ಯ ರಾಮಮಂದಿರ(Rama Mandir) ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ‌ ತಲುಪುತ್ತಿದೆ. ಜನವರಿ 22ರಂದು ರಾಮಮಂದಿರ ಉದ್ಘಾಟನೆ(Inauguration) ದಿನಾಂಕ ನಿಗದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ಅಭಿಜಿತ್ ಮುಹೂರ್ತ ಮೃಗಶಿರಾ ನಕ್ಷತ್ರದಲ್ಲಿ ಮಧ್ಯಾಹ್ನ 12:20 ಕ್ಕೆ ರಾಮಲಲ್ಲಾ ಮಹಾಮಸ್ತಕಾಭಿಷೇಕವನ್ನು ನೆರವೇರಿಸಲಿದ್ದಾರೆ. ಈ ಕಾರ್ಯಕ್ಕೆ ಅಂತಾರಾಷ್ಟ್ರೀಯ(International) ರೂಪ ನೀಡಲು ತಯಾರಿ ನಡದಿದೆ. ಸಮಾರಂಭವನ್ನು ನಾಲ್ಕು ಹಂತಗಳಾಗಿ ವಿಂಗಡಿಸಿ ಸಿದ್ಧತೆಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ.

Advertisement
Advertisement

ಮೊದಲ ಹಂತವು ರಾಮಲಲ್ಲಾ ಪ್ರತಿಷ್ಠಾಪನೆ ತಯಾರಿ ಬಗ್ಗೆ ಡಿಸೆಂಬರ್ 20ರಂದು ಸಭೆ ನಡೆಲಾಗಿದೆ. ಇದರಲ್ಲಿ ಕಾರ್ಯ ಕ್ರಮದ ರೂಪುರೇಷೆ ಸಿದ್ಧಪಡಿಸಲಾಗುತ್ತದೆ. ಇದಕ್ಕಾಗಿ ಚಾಲನಾ ಸಮಿತಿಗಳನ್ನು ರಚಿಸಲಾಗಿದೆ. ಜಿಲ್ಲಾ ಮತ್ತು ಬ್ಲಾಕ್ ಮಟ್ಟದಲ್ಲಿ ತಲಾ 10 ಜನರ ಗುಂಪು ರಚಿಸಲು ಒಪ್ಪಿಗೆ ನೀಡಲಾಗಿದೆ. ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಸಮಿತಿಗಳಲ್ಲಿ ಮಂದಿರ ಹೋರಾಟದಲ್ಲಿ ಭಾಗಿಯಾದ ಕರಸೇವಕರನ್ನು ಸೇರಿಸಿಕೊಳ್ಳಲು ನಿರ್ಧರಿಸಲಾಗದೆ. ಗುಂಪುಗಳು 250 ಸ್ಥಳಗಳಲ್ಲಿ ಸಭೆಗಳನ್ನು ನಡೆಸು ಕಾರ್ಯಯೋಜನೆ ರೂಪಿಸಲಾಗಿದೆ. ಕಾರ್ಯದಲ್ಲಿ ಹೆಚ್ಚು ಹೆಚ್ಚು ಜನರನ್ನು ತೊಡಗಿಸಿಕೊಳ್ಳಲು ಮನವಿ ಸಮಿತಿಗಳು ಮನವಿ ಮಾಡಲಿವೆ. ಎರಡನೇ ಹಂತ ಜನವರಿ 1ರಿಂದ ಆರಂಭವಾಗಲಿದೆ.

Advertisement

ಇದರಲ್ಲಿ ಮನೆ,ಮನೆಗೆ ಸಂಪರ್ಕ ಯೋಜನೆಯಡಿ 10 ಕೋಟಿ ಕುಟುಂಬಗಳಲ್ಲಿ ತಲುಪವ ಗುರಿ ಹೊಂದಲಾಗಿದೆ. ಅಕ್ಷತೆ, ರಾಮಲಲ್ಲ ಮೂರ್ತಿ ಚಿತ್ರ ಹಾಗೂ ಕರಪತ್ರವನ್ನು 10 ಕೋಟಿ ಕುಟುಂಬಗಳಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಉದ್ಘಾಟನೆ ದಿನದಂದು ಮನೆಗಳಲ್ಲಿ ದೀಪೋತ್ಸವ ಆಚರಣೆಗೆ ಮನವಿ ಮಾಡಲಿದ್ದಾರೆ. ಜನವರಿ 22ರಂದು ಅಂದರೆ ರಾಮಲಲ್ಲಾ ಪ್ರತಿಷ್ಠಾಪನಾ ದಿನ ಮೂರನೇ ಹಂತವಾಗಿದೆ. ಅಂದು ಇಡೀ ದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡುವುದಾಗಿದೆ. ಮನೆಮನೆಗಳಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯುವಂತಹ ವಾತಾವರಣ ನಿರ್ಮಾಣವಾಗಲಿದೆ. ನಾಲ್ಕನೇ ಹಂತದಲ್ಲಿ ದೇಶಾದ್ಯಂತ ಅಯೋಧ್ಯೆಗೆ ಬರುವ ಭಕ್ತಾದಿಗಳಿಗೆ ರಾಮಲಲ್ಲಾ ದರ್ಶನ ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ.

ಈ ಹಂತವು ಗಣರಾಜ್ಯೋತ್ಸವ ದಿನ ಜನವರಿ 26ಕ್ಕೆ ಪ್ರಾರಂಭವಾಗುತ್ತದೆ. ಸುಮಾರು ಒಂದು ತಿಂಗಳ ಕಾಲ ಅಂದರೆ ಫೆಬ್ರವರಿ 22 ರವರೆಗೆ ಮುಂದುವರಿಯುತ್ತದೆ. ರಾಮಲಲ್ಲಾ ದರ್ಶನ ಯೋಜನೆ ಅಭಿಯಾನವನ್ನು ಪ್ರಾಂತ್ಯವಾರು ನಡೆಸಲು ಚಿಂತಿಸಲಾಗಿದೆ. ಜನವರಿ 31 ಮತ್ತು ಫೆಬ್ರವರಿ 01 ರಂದು ಅವಧ್ ಪ್ರಾಂತ್ಯದ ಭಕ್ತರಿಗೆ ದರ್ಶನ ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ.

Advertisement
Finally, the day came to enshrine Rama in his birthplace Ayodhya. The construction work of Ram Mandir in Ayodhya is reaching its final stage. The date of inauguration of Ram temple is fixed on January 22. Prime Minister Narendra Modi will perform Ramlalla Mahamastakabhisheka at 12:20 PM at Abhijit Muhurta Mrigashira Nakshatra. Preparations are underway to make this work international. It has been decided to divide the ceremony into four stages and carry out the preparations.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

16 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

16 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

16 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

17 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

19 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

21 hours ago