ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ಕೆಪಿಸಿಯಿಂದ ನೇರವಾಗಿ ವಿದ್ಯುತ್ ಒದಗಿಸಲು ನಿರ್ಮಿಸಲಾದ ವಿದ್ಯುತ್ ಗ್ರಿಡ್ ಅನ್ನು ಕೊಂಕಣ ರೈಲ್ವೆ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಜಾ ಉದ್ಘಾಟಿಸಿದರು.
ರಾಜ್ಯಗಳ ವಿದ್ಯುತ್ ಪೂರೈಕೆ ಕಂಪನಿಗಳಿಂದ ಕೊಂಕಣ ರೈಲ್ವೆ ನಿಗಮವು ವಿದ್ಯುತ್ ಪಡೆಯುತ್ತಿದ್ದು, ರಾಜ್ಯದ ಮುಲಿ, ಬಾರ್ಕೂರು, ಸೇನಾಪುರ, ಕುಂದಾಪುರ ಮುರ್ಡೇಶ್ವರ, ಕುಮಟಾ, ಕಾರವಾರ ಹೀಗೆ ವಿದ್ಯುತ್ ಗ್ರಿಡ್ಗಳಿಂದ ವಿದ್ಯುತ್ ಸಂಪರ್ಕ ಹೊಂದಲಾಗಿದೆ. ಆದರೆ ಈ ಗ್ರಿಡ್ಗಳಲ್ಲಿ ವಿದ್ಯುತ್ ಕೈಕೊಟ್ಟರೆ, ರೈಲುಗಳ ಸಂಚಾರಕ್ಕೆ ಗೋವಾದ ಬಾಳ್ಳಿ ಗ್ರಿಡ್ನಿಂದ ಕರ್ನಾಟಕ ವಿದ್ಯುತ್ ಪಡೆಯಬೇಕಿತ್ತು. ಈ ಸಮಸ್ಯೆ ತಪ್ಪಿಸಲು ವಿದ್ಯುತ್ ಉತ್ಪಾದಿಸುವ ಕೆಪಿಸಿಯಿಂದಲೇ ನೇರವಾಗಿ ಪಡೆಯಲು ವಿದ್ಯುತ್ ನಿಗಮವು ಓಪನ್ ಆಕ್ಸಿಸ್ ಬಿಲ್ಲಿಂಗ್ ವ್ಯವಸ್ಥೆಯನ್ನು ಮಾಡಿಕೊಂಡಿದೆ. ಕದ್ರಾ ವಿದ್ಯುದಾಗಾರದಿಂದ ನೇರವಾಗಿ 110 ಕೆವಿ ವಿದ್ಯುತ್ ಲೈನ್ ಎಳೆದು ವಿದ್ಯುತ್ ಸಂಪರ್ಕ ಪಡೆಯಲಾಗಿದೆ. ಇದರಿಂದ ಮುರ್ಡೇಶ್ವರ ಅಥವಾ ಕುಮಟಾ ಮುಂತಾದೆಡೆ ವಿದ್ಯುತ್ ಸಂಪರ್ಕ ಕೈಕೊಟ್ಟರೆ, ಗೋವಾ ಮೊರೆ ಹೋಗುವ ಅವಶ್ಯಕತೆ ಇಲ್ಲ ಎಂದು ಕೊಂಕಣ ರೈಲ್ವೆ ನಿಗಮ ತಿಳಿಸಿದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…