ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ಕೆಪಿಸಿಯಿಂದ ನೇರವಾಗಿ ವಿದ್ಯುತ್ ಒದಗಿಸಲು ನಿರ್ಮಿಸಲಾದ ವಿದ್ಯುತ್ ಗ್ರಿಡ್ ಅನ್ನು ಕೊಂಕಣ ರೈಲ್ವೆ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಜಾ ಉದ್ಘಾಟಿಸಿದರು.
ರಾಜ್ಯಗಳ ವಿದ್ಯುತ್ ಪೂರೈಕೆ ಕಂಪನಿಗಳಿಂದ ಕೊಂಕಣ ರೈಲ್ವೆ ನಿಗಮವು ವಿದ್ಯುತ್ ಪಡೆಯುತ್ತಿದ್ದು, ರಾಜ್ಯದ ಮುಲಿ, ಬಾರ್ಕೂರು, ಸೇನಾಪುರ, ಕುಂದಾಪುರ ಮುರ್ಡೇಶ್ವರ, ಕುಮಟಾ, ಕಾರವಾರ ಹೀಗೆ ವಿದ್ಯುತ್ ಗ್ರಿಡ್ಗಳಿಂದ ವಿದ್ಯುತ್ ಸಂಪರ್ಕ ಹೊಂದಲಾಗಿದೆ. ಆದರೆ ಈ ಗ್ರಿಡ್ಗಳಲ್ಲಿ ವಿದ್ಯುತ್ ಕೈಕೊಟ್ಟರೆ, ರೈಲುಗಳ ಸಂಚಾರಕ್ಕೆ ಗೋವಾದ ಬಾಳ್ಳಿ ಗ್ರಿಡ್ನಿಂದ ಕರ್ನಾಟಕ ವಿದ್ಯುತ್ ಪಡೆಯಬೇಕಿತ್ತು. ಈ ಸಮಸ್ಯೆ ತಪ್ಪಿಸಲು ವಿದ್ಯುತ್ ಉತ್ಪಾದಿಸುವ ಕೆಪಿಸಿಯಿಂದಲೇ ನೇರವಾಗಿ ಪಡೆಯಲು ವಿದ್ಯುತ್ ನಿಗಮವು ಓಪನ್ ಆಕ್ಸಿಸ್ ಬಿಲ್ಲಿಂಗ್ ವ್ಯವಸ್ಥೆಯನ್ನು ಮಾಡಿಕೊಂಡಿದೆ. ಕದ್ರಾ ವಿದ್ಯುದಾಗಾರದಿಂದ ನೇರವಾಗಿ 110 ಕೆವಿ ವಿದ್ಯುತ್ ಲೈನ್ ಎಳೆದು ವಿದ್ಯುತ್ ಸಂಪರ್ಕ ಪಡೆಯಲಾಗಿದೆ. ಇದರಿಂದ ಮುರ್ಡೇಶ್ವರ ಅಥವಾ ಕುಮಟಾ ಮುಂತಾದೆಡೆ ವಿದ್ಯುತ್ ಸಂಪರ್ಕ ಕೈಕೊಟ್ಟರೆ, ಗೋವಾ ಮೊರೆ ಹೋಗುವ ಅವಶ್ಯಕತೆ ಇಲ್ಲ ಎಂದು ಕೊಂಕಣ ರೈಲ್ವೆ ನಿಗಮ ತಿಳಿಸಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…