ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ಕೆಪಿಸಿಯಿಂದ ನೇರವಾಗಿ ವಿದ್ಯುತ್ ಒದಗಿಸಲು ನಿರ್ಮಿಸಲಾದ ವಿದ್ಯುತ್ ಗ್ರಿಡ್ ಅನ್ನು ಕೊಂಕಣ ರೈಲ್ವೆ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಜಾ ಉದ್ಘಾಟಿಸಿದರು.
ರಾಜ್ಯಗಳ ವಿದ್ಯುತ್ ಪೂರೈಕೆ ಕಂಪನಿಗಳಿಂದ ಕೊಂಕಣ ರೈಲ್ವೆ ನಿಗಮವು ವಿದ್ಯುತ್ ಪಡೆಯುತ್ತಿದ್ದು, ರಾಜ್ಯದ ಮುಲಿ, ಬಾರ್ಕೂರು, ಸೇನಾಪುರ, ಕುಂದಾಪುರ ಮುರ್ಡೇಶ್ವರ, ಕುಮಟಾ, ಕಾರವಾರ ಹೀಗೆ ವಿದ್ಯುತ್ ಗ್ರಿಡ್ಗಳಿಂದ ವಿದ್ಯುತ್ ಸಂಪರ್ಕ ಹೊಂದಲಾಗಿದೆ. ಆದರೆ ಈ ಗ್ರಿಡ್ಗಳಲ್ಲಿ ವಿದ್ಯುತ್ ಕೈಕೊಟ್ಟರೆ, ರೈಲುಗಳ ಸಂಚಾರಕ್ಕೆ ಗೋವಾದ ಬಾಳ್ಳಿ ಗ್ರಿಡ್ನಿಂದ ಕರ್ನಾಟಕ ವಿದ್ಯುತ್ ಪಡೆಯಬೇಕಿತ್ತು. ಈ ಸಮಸ್ಯೆ ತಪ್ಪಿಸಲು ವಿದ್ಯುತ್ ಉತ್ಪಾದಿಸುವ ಕೆಪಿಸಿಯಿಂದಲೇ ನೇರವಾಗಿ ಪಡೆಯಲು ವಿದ್ಯುತ್ ನಿಗಮವು ಓಪನ್ ಆಕ್ಸಿಸ್ ಬಿಲ್ಲಿಂಗ್ ವ್ಯವಸ್ಥೆಯನ್ನು ಮಾಡಿಕೊಂಡಿದೆ. ಕದ್ರಾ ವಿದ್ಯುದಾಗಾರದಿಂದ ನೇರವಾಗಿ 110 ಕೆವಿ ವಿದ್ಯುತ್ ಲೈನ್ ಎಳೆದು ವಿದ್ಯುತ್ ಸಂಪರ್ಕ ಪಡೆಯಲಾಗಿದೆ. ಇದರಿಂದ ಮುರ್ಡೇಶ್ವರ ಅಥವಾ ಕುಮಟಾ ಮುಂತಾದೆಡೆ ವಿದ್ಯುತ್ ಸಂಪರ್ಕ ಕೈಕೊಟ್ಟರೆ, ಗೋವಾ ಮೊರೆ ಹೋಗುವ ಅವಶ್ಯಕತೆ ಇಲ್ಲ ಎಂದು ಕೊಂಕಣ ರೈಲ್ವೆ ನಿಗಮ ತಿಳಿಸಿದೆ.
ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್…
ಜಗತ್ತಿನ ಯಾವುದೇ ಕಡೆಗಳಲ್ಲಿ ನೆಲೆಸಿದರೂ ನಮ್ಮ ಭಾಷೆ- ಸಂಸ್ಕೃತಿ, ಸಂಸ್ಕಾರಗಳನ್ನು ಮರೆಯಬಾರದು ಎಂದು…
ಕರ್ನಾಟಕದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ…
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ…
ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ…
ಮಕ್ಕಳಲ್ಲಿ ಮೌನವನ್ನು ಮುರಿದು ಮಾತನಾಡುವ ಹಂಬಲ ಪ್ರಾರಂಭವಾಗುವುದೇ ಮೂರು ತಿಂಗಳಿನ ನಂತರ. ಅಲ್ಲಿಯ…