ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ಕೆಪಿಸಿಯಿಂದ ನೇರವಾಗಿ ವಿದ್ಯುತ್ ಒದಗಿಸಲು ನಿರ್ಮಿಸಲಾದ ವಿದ್ಯುತ್ ಗ್ರಿಡ್ ಅನ್ನು ಕೊಂಕಣ ರೈಲ್ವೆ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಜಾ ಉದ್ಘಾಟಿಸಿದರು.
ರಾಜ್ಯಗಳ ವಿದ್ಯುತ್ ಪೂರೈಕೆ ಕಂಪನಿಗಳಿಂದ ಕೊಂಕಣ ರೈಲ್ವೆ ನಿಗಮವು ವಿದ್ಯುತ್ ಪಡೆಯುತ್ತಿದ್ದು, ರಾಜ್ಯದ ಮುಲಿ, ಬಾರ್ಕೂರು, ಸೇನಾಪುರ, ಕುಂದಾಪುರ ಮುರ್ಡೇಶ್ವರ, ಕುಮಟಾ, ಕಾರವಾರ ಹೀಗೆ ವಿದ್ಯುತ್ ಗ್ರಿಡ್ಗಳಿಂದ ವಿದ್ಯುತ್ ಸಂಪರ್ಕ ಹೊಂದಲಾಗಿದೆ. ಆದರೆ ಈ ಗ್ರಿಡ್ಗಳಲ್ಲಿ ವಿದ್ಯುತ್ ಕೈಕೊಟ್ಟರೆ, ರೈಲುಗಳ ಸಂಚಾರಕ್ಕೆ ಗೋವಾದ ಬಾಳ್ಳಿ ಗ್ರಿಡ್ನಿಂದ ಕರ್ನಾಟಕ ವಿದ್ಯುತ್ ಪಡೆಯಬೇಕಿತ್ತು. ಈ ಸಮಸ್ಯೆ ತಪ್ಪಿಸಲು ವಿದ್ಯುತ್ ಉತ್ಪಾದಿಸುವ ಕೆಪಿಸಿಯಿಂದಲೇ ನೇರವಾಗಿ ಪಡೆಯಲು ವಿದ್ಯುತ್ ನಿಗಮವು ಓಪನ್ ಆಕ್ಸಿಸ್ ಬಿಲ್ಲಿಂಗ್ ವ್ಯವಸ್ಥೆಯನ್ನು ಮಾಡಿಕೊಂಡಿದೆ. ಕದ್ರಾ ವಿದ್ಯುದಾಗಾರದಿಂದ ನೇರವಾಗಿ 110 ಕೆವಿ ವಿದ್ಯುತ್ ಲೈನ್ ಎಳೆದು ವಿದ್ಯುತ್ ಸಂಪರ್ಕ ಪಡೆಯಲಾಗಿದೆ. ಇದರಿಂದ ಮುರ್ಡೇಶ್ವರ ಅಥವಾ ಕುಮಟಾ ಮುಂತಾದೆಡೆ ವಿದ್ಯುತ್ ಸಂಪರ್ಕ ಕೈಕೊಟ್ಟರೆ, ಗೋವಾ ಮೊರೆ ಹೋಗುವ ಅವಶ್ಯಕತೆ ಇಲ್ಲ ಎಂದು ಕೊಂಕಣ ರೈಲ್ವೆ ನಿಗಮ ತಿಳಿಸಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…