ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ಕೆಪಿಸಿಯಿಂದ ನೇರವಾಗಿ ವಿದ್ಯುತ್ ಒದಗಿಸಲು ನಿರ್ಮಿಸಲಾದ ವಿದ್ಯುತ್ ಗ್ರಿಡ್ ಅನ್ನು ಕೊಂಕಣ ರೈಲ್ವೆ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಜಾ ಉದ್ಘಾಟಿಸಿದರು.
ರಾಜ್ಯಗಳ ವಿದ್ಯುತ್ ಪೂರೈಕೆ ಕಂಪನಿಗಳಿಂದ ಕೊಂಕಣ ರೈಲ್ವೆ ನಿಗಮವು ವಿದ್ಯುತ್ ಪಡೆಯುತ್ತಿದ್ದು, ರಾಜ್ಯದ ಮುಲಿ, ಬಾರ್ಕೂರು, ಸೇನಾಪುರ, ಕುಂದಾಪುರ ಮುರ್ಡೇಶ್ವರ, ಕುಮಟಾ, ಕಾರವಾರ ಹೀಗೆ ವಿದ್ಯುತ್ ಗ್ರಿಡ್ಗಳಿಂದ ವಿದ್ಯುತ್ ಸಂಪರ್ಕ ಹೊಂದಲಾಗಿದೆ. ಆದರೆ ಈ ಗ್ರಿಡ್ಗಳಲ್ಲಿ ವಿದ್ಯುತ್ ಕೈಕೊಟ್ಟರೆ, ರೈಲುಗಳ ಸಂಚಾರಕ್ಕೆ ಗೋವಾದ ಬಾಳ್ಳಿ ಗ್ರಿಡ್ನಿಂದ ಕರ್ನಾಟಕ ವಿದ್ಯುತ್ ಪಡೆಯಬೇಕಿತ್ತು. ಈ ಸಮಸ್ಯೆ ತಪ್ಪಿಸಲು ವಿದ್ಯುತ್ ಉತ್ಪಾದಿಸುವ ಕೆಪಿಸಿಯಿಂದಲೇ ನೇರವಾಗಿ ಪಡೆಯಲು ವಿದ್ಯುತ್ ನಿಗಮವು ಓಪನ್ ಆಕ್ಸಿಸ್ ಬಿಲ್ಲಿಂಗ್ ವ್ಯವಸ್ಥೆಯನ್ನು ಮಾಡಿಕೊಂಡಿದೆ. ಕದ್ರಾ ವಿದ್ಯುದಾಗಾರದಿಂದ ನೇರವಾಗಿ 110 ಕೆವಿ ವಿದ್ಯುತ್ ಲೈನ್ ಎಳೆದು ವಿದ್ಯುತ್ ಸಂಪರ್ಕ ಪಡೆಯಲಾಗಿದೆ. ಇದರಿಂದ ಮುರ್ಡೇಶ್ವರ ಅಥವಾ ಕುಮಟಾ ಮುಂತಾದೆಡೆ ವಿದ್ಯುತ್ ಸಂಪರ್ಕ ಕೈಕೊಟ್ಟರೆ, ಗೋವಾ ಮೊರೆ ಹೋಗುವ ಅವಶ್ಯಕತೆ ಇಲ್ಲ ಎಂದು ಕೊಂಕಣ ರೈಲ್ವೆ ನಿಗಮ ತಿಳಿಸಿದೆ.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…