#Agriculture |ಏಕೀಕೃತ ರೈತ ಸಹಾಯವಾಣಿ ಕರೆ ಕೇಂದ್ರ ಉದ್ಘಾಟನೆ | ಬೆಳೆ ಸಮೀಕ್ಷೆ ತರಬೇತಿ ಕಾರ್ಯಾಗಾರ |

August 17, 2023
1:09 PM
ಕೃಷಿ ಇಲಾಖೆಯಲ್ಲಿ ರೈತರ ಮಾಹಿತಿ, ಸಲಹೆ, ಮಾರ್ಗದರ್ಶನಕ್ಕೆ ಏಕೀಕೃತ ಸಹಾಯವಾಣಿ ಕರೆ ಕೇಂದ್ರ ಇಂದಿನಿಂದ ಪ್ರಾರಂಭವಾಗಿದೆ. ವಿವಿಧ 8 ಯೋಜನೆಗಳ ಮಾಹಿತಿಗೆ ಇದ್ದ ಪ್ರತ್ಯೇಕ ದೂರವಾಣಿ ಸಂಖ್ಯೆಗಳನ್ನು ಒಗ್ಗೂಡಿಸಿ ಒಂದೇ ಸಂಖ್ಯೆಯಲ್ಲಿ ಎಲ್ಲ ಮಾಹಿತಿಗಳು ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.

ರೈತರಿಗೆ ಮಾಹಿತಿ ಸಲಹೆ, ಮಾರ್ಗದರ್ಶನ ನೀಡುವ ಉದ್ದೇಶದಿಂದ ಕೃಷಿ ಇಲಾಖೆ ಆಯುಕ್ತಾಲಯದಲ್ಲಿ ಸ್ಥಾಪಿಸಿರುವ ಏಕೀಕೃತ ಸಹಾಯವಾಣಿ ಕರೆ ಕೇಂದ್ರವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು. ಇದೇ ವೇಳೆ  ಬೆಳೆ ಸಮೀಕ್ಷೆ ಕುರಿತು ತರಬೇತುದಾರರಿಗೆ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ನಡೆಯುತ್ತಿದೆ.

ಕೃಷಿ ಇಲಾಖೆಯಲ್ಲಿ ರೈತರ ಮಾಹಿತಿ, ಸಲಹೆ, ಮಾರ್ಗದರ್ಶನಕ್ಕೆ ಏಕೀಕೃತ ಸಹಾಯವಾಣಿ ಕರೆ ಕೇಂದ್ರ ಇಂದಿನಿಂದ ಪ್ರಾರಂಭವಾಗಿದೆ. ವಿವಿಧ 8 ಯೋಜನೆಗಳ ಮಾಹಿತಿಗೆ ಇದ್ದ ಪ್ರತ್ಯೇಕ ದೂರವಾಣಿ ಸಂಖ್ಯೆಗಳನ್ನು ಒಗ್ಗೂಡಿಸಿ ಒಂದೇ ಸಂಖ್ಯೆಯಲ್ಲಿ ಎಲ್ಲ ಮಾಹಿತಿಗಳು ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.ನೂತನ ರೈತ ಸಹಾಯವಾಣಿ ಕರೆ ಸಂಖ್ಯೆ 1800425355 ಗೆ ಸಂಪರ್ಕಿಸಿ ಮಾಹಿತಿ, ಮಾರ್ಗದರ್ಶನ ಪಡೆಯಬಹುದಾಗಿದೆ.

Advertisement

ಮುಂದಿನ ದಿನಗಳಲ್ಲಿ ರೈತರಿಗೆ ಇನ್ನು ಹೆಚ್ಚಿನ ಅನುಕೂಲವಾಗುವ IVR-ML ಮತ್ತು AI (Interactive Voice Response, Machine Learning & Artificial Intelligence) ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಮಾಹಿತಿ, ಪರಿಹಾರಗಳನ್ನು ಮತ್ತಷ್ಟು ಸುಲಭ ಹಾಗೂ ಪರಿಣಾಮಕಾರಿಯಾಗಿ ರೈತರಿಗೆ ತಲುಪುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು.

ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನೂಪ್ ಕುಮಾರ್, ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror