ರೈತರಿಗೆ ಮಾಹಿತಿ ಸಲಹೆ, ಮಾರ್ಗದರ್ಶನ ನೀಡುವ ಉದ್ದೇಶದಿಂದ ಕೃಷಿ ಇಲಾಖೆ ಆಯುಕ್ತಾಲಯದಲ್ಲಿ ಸ್ಥಾಪಿಸಿರುವ ಏಕೀಕೃತ ಸಹಾಯವಾಣಿ ಕರೆ ಕೇಂದ್ರವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು. ಇದೇ ವೇಳೆ ಬೆಳೆ ಸಮೀಕ್ಷೆ ಕುರಿತು ತರಬೇತುದಾರರಿಗೆ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ನಡೆಯುತ್ತಿದೆ.
ಕೃಷಿ ಇಲಾಖೆಯಲ್ಲಿ ರೈತರ ಮಾಹಿತಿ, ಸಲಹೆ, ಮಾರ್ಗದರ್ಶನಕ್ಕೆ ಏಕೀಕೃತ ಸಹಾಯವಾಣಿ ಕರೆ ಕೇಂದ್ರ ಇಂದಿನಿಂದ ಪ್ರಾರಂಭವಾಗಿದೆ. ವಿವಿಧ 8 ಯೋಜನೆಗಳ ಮಾಹಿತಿಗೆ ಇದ್ದ ಪ್ರತ್ಯೇಕ ದೂರವಾಣಿ ಸಂಖ್ಯೆಗಳನ್ನು ಒಗ್ಗೂಡಿಸಿ ಒಂದೇ ಸಂಖ್ಯೆಯಲ್ಲಿ ಎಲ್ಲ ಮಾಹಿತಿಗಳು ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.ನೂತನ ರೈತ ಸಹಾಯವಾಣಿ ಕರೆ ಸಂಖ್ಯೆ 1800425355 ಗೆ ಸಂಪರ್ಕಿಸಿ ಮಾಹಿತಿ, ಮಾರ್ಗದರ್ಶನ ಪಡೆಯಬಹುದಾಗಿದೆ.
ಮುಂದಿನ ದಿನಗಳಲ್ಲಿ ರೈತರಿಗೆ ಇನ್ನು ಹೆಚ್ಚಿನ ಅನುಕೂಲವಾಗುವ IVR-ML ಮತ್ತು AI (Interactive Voice Response, Machine Learning & Artificial Intelligence) ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಮಾಹಿತಿ, ಪರಿಹಾರಗಳನ್ನು ಮತ್ತಷ್ಟು ಸುಲಭ ಹಾಗೂ ಪರಿಣಾಮಕಾರಿಯಾಗಿ ರೈತರಿಗೆ ತಲುಪುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು.
ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನೂಪ್ ಕುಮಾರ್, ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…