ರೈತರಿಗೆ ಮಾಹಿತಿ ಸಲಹೆ, ಮಾರ್ಗದರ್ಶನ ನೀಡುವ ಉದ್ದೇಶದಿಂದ ಕೃಷಿ ಇಲಾಖೆ ಆಯುಕ್ತಾಲಯದಲ್ಲಿ ಸ್ಥಾಪಿಸಿರುವ ಏಕೀಕೃತ ಸಹಾಯವಾಣಿ ಕರೆ ಕೇಂದ್ರವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು. ಇದೇ ವೇಳೆ ಬೆಳೆ ಸಮೀಕ್ಷೆ ಕುರಿತು ತರಬೇತುದಾರರಿಗೆ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ನಡೆಯುತ್ತಿದೆ.
ಕೃಷಿ ಇಲಾಖೆಯಲ್ಲಿ ರೈತರ ಮಾಹಿತಿ, ಸಲಹೆ, ಮಾರ್ಗದರ್ಶನಕ್ಕೆ ಏಕೀಕೃತ ಸಹಾಯವಾಣಿ ಕರೆ ಕೇಂದ್ರ ಇಂದಿನಿಂದ ಪ್ರಾರಂಭವಾಗಿದೆ. ವಿವಿಧ 8 ಯೋಜನೆಗಳ ಮಾಹಿತಿಗೆ ಇದ್ದ ಪ್ರತ್ಯೇಕ ದೂರವಾಣಿ ಸಂಖ್ಯೆಗಳನ್ನು ಒಗ್ಗೂಡಿಸಿ ಒಂದೇ ಸಂಖ್ಯೆಯಲ್ಲಿ ಎಲ್ಲ ಮಾಹಿತಿಗಳು ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.ನೂತನ ರೈತ ಸಹಾಯವಾಣಿ ಕರೆ ಸಂಖ್ಯೆ 1800425355 ಗೆ ಸಂಪರ್ಕಿಸಿ ಮಾಹಿತಿ, ಮಾರ್ಗದರ್ಶನ ಪಡೆಯಬಹುದಾಗಿದೆ.
ಮುಂದಿನ ದಿನಗಳಲ್ಲಿ ರೈತರಿಗೆ ಇನ್ನು ಹೆಚ್ಚಿನ ಅನುಕೂಲವಾಗುವ IVR-ML ಮತ್ತು AI (Interactive Voice Response, Machine Learning & Artificial Intelligence) ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಮಾಹಿತಿ, ಪರಿಹಾರಗಳನ್ನು ಮತ್ತಷ್ಟು ಸುಲಭ ಹಾಗೂ ಪರಿಣಾಮಕಾರಿಯಾಗಿ ರೈತರಿಗೆ ತಲುಪುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು.
ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನೂಪ್ ಕುಮಾರ್, ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…