Advertisement
ಪ್ರಮುಖ

#Agriculture |ಏಕೀಕೃತ ರೈತ ಸಹಾಯವಾಣಿ ಕರೆ ಕೇಂದ್ರ ಉದ್ಘಾಟನೆ | ಬೆಳೆ ಸಮೀಕ್ಷೆ ತರಬೇತಿ ಕಾರ್ಯಾಗಾರ |

Share

ರೈತರಿಗೆ ಮಾಹಿತಿ ಸಲಹೆ, ಮಾರ್ಗದರ್ಶನ ನೀಡುವ ಉದ್ದೇಶದಿಂದ ಕೃಷಿ ಇಲಾಖೆ ಆಯುಕ್ತಾಲಯದಲ್ಲಿ ಸ್ಥಾಪಿಸಿರುವ ಏಕೀಕೃತ ಸಹಾಯವಾಣಿ ಕರೆ ಕೇಂದ್ರವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು. ಇದೇ ವೇಳೆ  ಬೆಳೆ ಸಮೀಕ್ಷೆ ಕುರಿತು ತರಬೇತುದಾರರಿಗೆ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ನಡೆಯುತ್ತಿದೆ.

ಕೃಷಿ ಇಲಾಖೆಯಲ್ಲಿ ರೈತರ ಮಾಹಿತಿ, ಸಲಹೆ, ಮಾರ್ಗದರ್ಶನಕ್ಕೆ ಏಕೀಕೃತ ಸಹಾಯವಾಣಿ ಕರೆ ಕೇಂದ್ರ ಇಂದಿನಿಂದ ಪ್ರಾರಂಭವಾಗಿದೆ. ವಿವಿಧ 8 ಯೋಜನೆಗಳ ಮಾಹಿತಿಗೆ ಇದ್ದ ಪ್ರತ್ಯೇಕ ದೂರವಾಣಿ ಸಂಖ್ಯೆಗಳನ್ನು ಒಗ್ಗೂಡಿಸಿ ಒಂದೇ ಸಂಖ್ಯೆಯಲ್ಲಿ ಎಲ್ಲ ಮಾಹಿತಿಗಳು ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ.ನೂತನ ರೈತ ಸಹಾಯವಾಣಿ ಕರೆ ಸಂಖ್ಯೆ 1800425355 ಗೆ ಸಂಪರ್ಕಿಸಿ ಮಾಹಿತಿ, ಮಾರ್ಗದರ್ಶನ ಪಡೆಯಬಹುದಾಗಿದೆ.

ಮುಂದಿನ ದಿನಗಳಲ್ಲಿ ರೈತರಿಗೆ ಇನ್ನು ಹೆಚ್ಚಿನ ಅನುಕೂಲವಾಗುವ IVR-ML ಮತ್ತು AI (Interactive Voice Response, Machine Learning & Artificial Intelligence) ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಮಾಹಿತಿ, ಪರಿಹಾರಗಳನ್ನು ಮತ್ತಷ್ಟು ಸುಲಭ ಹಾಗೂ ಪರಿಣಾಮಕಾರಿಯಾಗಿ ರೈತರಿಗೆ ತಲುಪುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು.

ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನೂಪ್ ಕುಮಾರ್, ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

5 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

6 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

14 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

19 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

19 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago