Advertisement
ಸುದ್ದಿಗಳು

ಪುತ್ತೂರಿನಲ್ಲಿ ತಾಳಮದ್ದಳೆ ಸಪ್ತಾಹ ಉದ್ಘಾಟನೆ | ಜು.7 ಸಮಾರೋಪ |

Share
ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಕಲಾ ಮಂದಿರದಲ್ಲಿ  ತಾಳಮದ್ದಳೆ ಸಪ್ತಾಹದ ಉದ್ಘಾಟನಾ ಸಮಾರಂಭ ನಡೆಯಿತು.ಪುತ್ತೂರು ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಇದರ ಮ್ಹಾಲಕರಾದ ಜಿ.ಬಲರಾಮ ಆಚಾರ್ಯರು ದೀಪಜ್ವಲನೆಯ ಮೂಲಕ ತಾಳಮದ್ದಳೆ ಸಪ್ತಾಹವನ್ನು ಉದ್ಘಾಟಿಸಿದರು.
ಉದ್ಘಾಟನಾ ಸಮಾರಂಭದಲಿ ಮಾತನಾಡಿದ ಪುತ್ತೂರು ಶಾಸಕ  ಅಶೋಕ ಕುಮಾರ್ ರೈ, “ಬಾಲ್ಯದಲ್ಲಿ ಯಕ್ಷಗಾನದ ಸೊಗಸನ್ನು ಸವಿದ ಅನುಭವ ಅನನ್ಯ. ಒಂದು ಕಾಲಘಟ್ಟದ ಯಶಸ್ವೀ ತುಳು ಕಥಾನಕ ‘ಕಾಡಮಲ್ಲಿಗೆ’ ಪ್ರಸಂಗವು ತುಂಬಾ ಆಕರ್ಷಿಸಿತ್ತು. ಶಾಲಾ ಜೀವನದಲ್ಲಿ ನಾಟಕ, ಯಕ್ಷಗಾನದಲ್ಲಿ ಪಾತ್ರವಹಿಸಿದ ದಿನಮಾನಗಳು ನೆನಪಾಗುತ್ತದೆ. ತಾಳಮದ್ದಳೆಯಲ್ಲಿ ಪಾತ್ರಗಳ ಮೂಲಕ ಉತ್ತಮ ವಿಚಾರವನ್ನು ಬಿತ್ತರಿಸಲು ಅವಕಾಶಗಳಿವೆ. ಉತ್ತಮ ಸಂದೇಶವನ್ನು ಕೊಡುವ ಕಥಾನಕಗಳಿವೆ. ಆಟ ಇರಲಿ, ಕೂಟ ಇರಲಿ, ಅಲ್ಲಿ ಪುರಾಣ ಪ್ರಪಂಚದ ದರ್ಶನವಾಗುವುದರಿಂದ ಕಥೆಗಳು ಬಹುಬೇಗ ಅರ್ಥವಾಗುತ್ತವೆ” ಎಂದು ಹೇಳಿದರು.
ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ.ಅಶೋಕ ನಾಮದೇವ ಪ್ರಭು ಶುಭಾಶಂಸನೆ ಮಾಡಿದರು. ಪ್ರಗತಿಪರ ಕೃಷಿಕ ಪದ್ಯಾಣ ಗೋಪಾಲಕೃಷ್ಣ ಭಟ್ಟರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ  ಪೊಳಲಿಯ ಕಲಾಪೋಷಕ, ಸಂಘಟಕ ವೆಂಕಟೇಶ ನಾವಡರಿಗೆ ‘ಕುರಿಯ ಸ್ಮೃತಿ ಗೌರವ’ ಸಲ್ಲಿಸಲಾಯಿತು.
ಕುರಿಯ ಪ್ರತಿಷ್ಠಾನದ ಸಂಚಾಲಕ ಉಜಿರೆ ಅಶೋಕ ಭಟ್ಟರು ಪ್ರಸ್ತಾವನೆಯೊಂದಿಗೆ ಪದ್ಯಾಣ ಗಣಪತಿ ಭಟ್ಟರ ಸಂಸ್ಮರಣೆ ಮಾಡಿದರು. ಕಲಾವಿದ, ಲೇಖಕ ನಾ. ಕಾರಂತ ಪೆರಾಜೆ ನಿರ್ವಹಿಸಿ ವಂದಿಸಿದರು. ಭಾಗವತ ರಮೇಶ ಭಟ್ ಪುತ್ತೂರು, ಸ್ವಸ್ತಿಕ್ ಪದ್ಯಾಣ ಸಹಕರಿಸಿದರು. ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಉಜಿರೆ ಇವರು ತಾಳಮದ್ದಳೆ ಸಪ್ತಾಹವನ್ನು ಆಯೋಜಿಸಿದ್ದಾರೆ.
ಸಪ್ತಾಹದ ಮೊದಲ ದಿನದ ತಾಳಮದ್ದಳೆಯ ಪ್ರಸಂಗ ‘ಭಕ್ತ ಪ್ರಹ್ಲಾದ’. ಕಲಾವಿದರಾಗಿ – ಎಂ.ದಿನೇಶ ಅಮ್ಮಣ್ಣಾಯ (ಭಾಗವತರು), ಎಂ.ಲಕ್ಷ್ಮೀಶ ಅಮ್ಮಣ್ಣಾಯ, ಪಿ.ಜಿ.ಜಗನ್ನಿವಾಸ ರಾವ್ (ಮದ್ದಳೆ-ಚೆಂಡೆ); ಅರ್ಥದಾರಿಗಳಾಗಿ ಸುಣ್ಣಂಬಳ ವಿಶ್ವೇಶ್ವರ ಭಟ್, ವಿಷ್ಣು ಶರ್ಮ ವಾಟೆಪಡ್ಪು, ರಾಮ ಜೋಯಿಸ್ ಬೆಳ್ಳಾರೆ, ನಾ. ಕಾರಂತ ಪೆರಾಜೆ, ರಾಮಚಂದ್ರ ಭಟ್ ದೇವರಗುಂಡಿ ಭಾಗವಹಿಸಿದ್ದರು.
ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭವು ಜುಲೈ 7, ರವಿವಾರ ಸಂಪನ್ನವಾಗಲಿದೆ. ಈ ಸಂದರ್ಭದಲ್ಲಿ ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿಯವರಿಗೆ ಪದ್ಯಾಣ ಪ್ರಶಸ್ತಿ ಹಾಗೂ ಬಿ.ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಗುವುದು.
Yakshagana talamaddale is a traditional form of theater in Karnataka, India that combines elements of dance, music, and drama. Talamaddale is a specific style of Yakshagana performance where two artists engage in a verbal duel, showcasing their wit and poetic skills. The performers, known as Bhagavathas, use elaborate costumes, makeup, and musical instruments to bring the characters to life on stage. Yakshagana talamaddale is not just entertaining, but also serves as a way to preserve and pass on the rich cultural heritage of Karnataka.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

10 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

10 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

11 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

11 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago