MIRROR FOCUS

ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿಲ್ಲದ ಕಾಡಾನೆ ದಾಳಿ | ಹೆಡದಾಳುವಿನಲ್ಲಿ ಕಾಡಾನೆ ದಾಳಿಗೆ ಯುವತಿ ಬಲಿ | ಸ್ಥಳೀಯರಿಂದ ಪ್ರತಿಭಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಡಾನೆ (Elephant) ದಾಳಿಗೆ ಮಹಿಳೆ (Woman) ಬಲಿಯಾದ ಘಟನೆ ಜಿಲ್ಲೆಯ ಆಲ್ದೂರು ಸಮೀಪದ ಹೆಡೆದಾಳು ಗ್ರಾಮದಲ್ಲಿ ನಡೆದಿದೆ. ಗಾಳಿಗುಂಡಿ ಗ್ರಾಮದಿಂದ ಹೆಡದಾಳು ಗುಡ್ಡದಕೆರೆ ಬಳಿಯ ಕಾಫಿ ತೋಟದ ಕೆಲಸಕ್ಕೆ ಬುಧವಾರ ಬೆಳಿಗ್ಗೆಯೇ ಆರು ಮಂದಿ ತೆರಳಿದ್ದರು. ಮನೆಯಿಂದ ತೆಗೆದುಕೊಂಡು ಹೋಗಿದ್ದ ಉಪಾಹಾರವನ್ನು ಕೆಲಸ ಆರಂಭಿಸುವ ಮೊದಲೆ ತಿನ್ನಲು ಒಟ್ಟಿಗೆ ನಾಲ್ವರು ಯುವತಿಯರು ಕುಳಿತಿದ್ದರು.ಈ ಸಂದರ್ಭದಲ್ಲಿ ಬಂದ ಆನೆಯನ್ನು ನೋಡಿದ ಎಲ್ಲರೂ ಓಡಿದರು. ಆದರೆ, ವೀಣಾ(45) ಅವರು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ವೀಣಾ ಅವರ ತಲೆಯ ಮೇಲೆ ಆನೆ ಕಾಲಿಟ್ಟಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

Advertisement

ಮೃತದೇಹ ನೋಡಿದ ಮತ್ತೊಬ್ಬ ಮಹಿಳೆ ಚಂದ್ರಿ(52) ಆಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದು, ಅವರನ್ನು ಆಲ್ಲೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವಿವಾಹಿತ ಮೀನಾ ಅವರೇ ದುಡಿದು ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಕಿರಿಯ ಸಹೋದರಿಯನ್ನು ಮದುವೆ ಕೂಡ ಮಾಡಿದ್ದರು. ಕಿರಿಯ ಸಹೋದರ ಮತ್ತು ತಂದೆಗೆ ವೀಣಾ ಅವರ ದುಡಿಮೆಯೇ ಆಧಾರವಾಗಿತ್ತು. ಕಾಫಿ ಹಣ್ಣು ಕೊಯ್ದು ಕಾಲ ಆಗಿರುವುದರಿಂದ ಬೆಳಿಗ್ಗೆ ಏಳು ಗಂಟೆಯಷ್ಟರಲ್ಲೇ ಕೆಲಸಕ್ಕೆ ಹೋಗಿದ್ದರು.

ಕಳೆದ ಕೆಲವು ದಿನಗಳಿಂದ ಸುಮಾರು 7 ಕಾಡಾನೆಗಳು ಕಾಫಿ ತೋಟದ ಸುತ್ತಮುತ್ತವೇ ಬೀಡು ಬಿಟ್ಟಿವೆ. ಇದರಿಂದ ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರು ಓಡಾಡುವುದು ಕಷ್ಟವಾಗಿದೆ. ಆನೆಗಳನ್ನು ಸ್ಥಳದಿಂದ ಓಡಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ (Forest Department) ಒತ್ತಾಯಿಸಿದ್ದಾರೆ.  ಈ ಭಾಗದಲ್ಲಿ ಕಳೆದ ಎರಡು ತಿಂಗಳಲ್ಲಿ ಆನೆ ದಾಳಿಗೆ ಇದು ಎರಡನೇ ಬಲಿಯಾಗಿದೆ. ಆಲ್ದೂರು ಅರಣ್ಯ ಇಲಾಖೆ ಮುಂದೆ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಮಧ್ಯಾಹ್ನ ನಾಗರಹೊಳೆಯಿಂದ ಆನೆ ಹಿಡಿಯಲು ಕುಮ್ಕಿ ಆನೆಗಳ ತಂಡ ಆಗಮಿಸಲಿದೆ.

The incident in which a woman was killed in a forest attack took place in Hededalu village near Aldur in the district. Six people had left for coffee plantation work on Wednesday morning. Four young women were sitting together to eat the breakfast they had taken from home before starting work. Everyone ran when they saw the elephant that came. However, Veena (45) could not escape. An elephant stepped on Meena's head. The woman was seriously injured and died on the spot.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

5 hours ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

14 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

14 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

14 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

14 hours ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

14 hours ago