Advertisement
MIRROR FOCUS

ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿಲ್ಲದ ಕಾಡಾನೆ ದಾಳಿ | ಹೆಡದಾಳುವಿನಲ್ಲಿ ಕಾಡಾನೆ ದಾಳಿಗೆ ಯುವತಿ ಬಲಿ | ಸ್ಥಳೀಯರಿಂದ ಪ್ರತಿಭಟನೆ

Share

ಕಾಡಾನೆ (Elephant) ದಾಳಿಗೆ ಮಹಿಳೆ (Woman) ಬಲಿಯಾದ ಘಟನೆ ಜಿಲ್ಲೆಯ ಆಲ್ದೂರು ಸಮೀಪದ ಹೆಡೆದಾಳು ಗ್ರಾಮದಲ್ಲಿ ನಡೆದಿದೆ. ಗಾಳಿಗುಂಡಿ ಗ್ರಾಮದಿಂದ ಹೆಡದಾಳು ಗುಡ್ಡದಕೆರೆ ಬಳಿಯ ಕಾಫಿ ತೋಟದ ಕೆಲಸಕ್ಕೆ ಬುಧವಾರ ಬೆಳಿಗ್ಗೆಯೇ ಆರು ಮಂದಿ ತೆರಳಿದ್ದರು. ಮನೆಯಿಂದ ತೆಗೆದುಕೊಂಡು ಹೋಗಿದ್ದ ಉಪಾಹಾರವನ್ನು ಕೆಲಸ ಆರಂಭಿಸುವ ಮೊದಲೆ ತಿನ್ನಲು ಒಟ್ಟಿಗೆ ನಾಲ್ವರು ಯುವತಿಯರು ಕುಳಿತಿದ್ದರು.ಈ ಸಂದರ್ಭದಲ್ಲಿ ಬಂದ ಆನೆಯನ್ನು ನೋಡಿದ ಎಲ್ಲರೂ ಓಡಿದರು. ಆದರೆ, ವೀಣಾ(45) ಅವರು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ವೀಣಾ ಅವರ ತಲೆಯ ಮೇಲೆ ಆನೆ ಕಾಲಿಟ್ಟಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತದೇಹ ನೋಡಿದ ಮತ್ತೊಬ್ಬ ಮಹಿಳೆ ಚಂದ್ರಿ(52) ಆಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದು, ಅವರನ್ನು ಆಲ್ಲೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವಿವಾಹಿತ ಮೀನಾ ಅವರೇ ದುಡಿದು ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಕಿರಿಯ ಸಹೋದರಿಯನ್ನು ಮದುವೆ ಕೂಡ ಮಾಡಿದ್ದರು. ಕಿರಿಯ ಸಹೋದರ ಮತ್ತು ತಂದೆಗೆ ವೀಣಾ ಅವರ ದುಡಿಮೆಯೇ ಆಧಾರವಾಗಿತ್ತು. ಕಾಫಿ ಹಣ್ಣು ಕೊಯ್ದು ಕಾಲ ಆಗಿರುವುದರಿಂದ ಬೆಳಿಗ್ಗೆ ಏಳು ಗಂಟೆಯಷ್ಟರಲ್ಲೇ ಕೆಲಸಕ್ಕೆ ಹೋಗಿದ್ದರು.

ಕಳೆದ ಕೆಲವು ದಿನಗಳಿಂದ ಸುಮಾರು 7 ಕಾಡಾನೆಗಳು ಕಾಫಿ ತೋಟದ ಸುತ್ತಮುತ್ತವೇ ಬೀಡು ಬಿಟ್ಟಿವೆ. ಇದರಿಂದ ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರು ಓಡಾಡುವುದು ಕಷ್ಟವಾಗಿದೆ. ಆನೆಗಳನ್ನು ಸ್ಥಳದಿಂದ ಓಡಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ (Forest Department) ಒತ್ತಾಯಿಸಿದ್ದಾರೆ.  ಈ ಭಾಗದಲ್ಲಿ ಕಳೆದ ಎರಡು ತಿಂಗಳಲ್ಲಿ ಆನೆ ದಾಳಿಗೆ ಇದು ಎರಡನೇ ಬಲಿಯಾಗಿದೆ. ಆಲ್ದೂರು ಅರಣ್ಯ ಇಲಾಖೆ ಮುಂದೆ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಮಧ್ಯಾಹ್ನ ನಾಗರಹೊಳೆಯಿಂದ ಆನೆ ಹಿಡಿಯಲು ಕುಮ್ಕಿ ಆನೆಗಳ ತಂಡ ಆಗಮಿಸಲಿದೆ.

The incident in which a woman was killed in a forest attack took place in Hededalu village near Aldur in the district. Six people had left for coffee plantation work on Wednesday morning. Four young women were sitting together to eat the breakfast they had taken from home before starting work. Everyone ran when they saw the elephant that came. However, Veena (45) could not escape. An elephant stepped on Meena's head. The woman was seriously injured and died on the spot.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

25 minutes ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

11 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

12 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

15 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago