Advertisement
MIRROR FOCUS

ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿಲ್ಲದ ಕಾಡಾನೆ ದಾಳಿ | ಹೆಡದಾಳುವಿನಲ್ಲಿ ಕಾಡಾನೆ ದಾಳಿಗೆ ಯುವತಿ ಬಲಿ | ಸ್ಥಳೀಯರಿಂದ ಪ್ರತಿಭಟನೆ

Share

ಕಾಡಾನೆ (Elephant) ದಾಳಿಗೆ ಮಹಿಳೆ (Woman) ಬಲಿಯಾದ ಘಟನೆ ಜಿಲ್ಲೆಯ ಆಲ್ದೂರು ಸಮೀಪದ ಹೆಡೆದಾಳು ಗ್ರಾಮದಲ್ಲಿ ನಡೆದಿದೆ. ಗಾಳಿಗುಂಡಿ ಗ್ರಾಮದಿಂದ ಹೆಡದಾಳು ಗುಡ್ಡದಕೆರೆ ಬಳಿಯ ಕಾಫಿ ತೋಟದ ಕೆಲಸಕ್ಕೆ ಬುಧವಾರ ಬೆಳಿಗ್ಗೆಯೇ ಆರು ಮಂದಿ ತೆರಳಿದ್ದರು. ಮನೆಯಿಂದ ತೆಗೆದುಕೊಂಡು ಹೋಗಿದ್ದ ಉಪಾಹಾರವನ್ನು ಕೆಲಸ ಆರಂಭಿಸುವ ಮೊದಲೆ ತಿನ್ನಲು ಒಟ್ಟಿಗೆ ನಾಲ್ವರು ಯುವತಿಯರು ಕುಳಿತಿದ್ದರು.ಈ ಸಂದರ್ಭದಲ್ಲಿ ಬಂದ ಆನೆಯನ್ನು ನೋಡಿದ ಎಲ್ಲರೂ ಓಡಿದರು. ಆದರೆ, ವೀಣಾ(45) ಅವರು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ವೀಣಾ ಅವರ ತಲೆಯ ಮೇಲೆ ಆನೆ ಕಾಲಿಟ್ಟಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತದೇಹ ನೋಡಿದ ಮತ್ತೊಬ್ಬ ಮಹಿಳೆ ಚಂದ್ರಿ(52) ಆಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದು, ಅವರನ್ನು ಆಲ್ಲೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವಿವಾಹಿತ ಮೀನಾ ಅವರೇ ದುಡಿದು ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಕಿರಿಯ ಸಹೋದರಿಯನ್ನು ಮದುವೆ ಕೂಡ ಮಾಡಿದ್ದರು. ಕಿರಿಯ ಸಹೋದರ ಮತ್ತು ತಂದೆಗೆ ವೀಣಾ ಅವರ ದುಡಿಮೆಯೇ ಆಧಾರವಾಗಿತ್ತು. ಕಾಫಿ ಹಣ್ಣು ಕೊಯ್ದು ಕಾಲ ಆಗಿರುವುದರಿಂದ ಬೆಳಿಗ್ಗೆ ಏಳು ಗಂಟೆಯಷ್ಟರಲ್ಲೇ ಕೆಲಸಕ್ಕೆ ಹೋಗಿದ್ದರು.

ಕಳೆದ ಕೆಲವು ದಿನಗಳಿಂದ ಸುಮಾರು 7 ಕಾಡಾನೆಗಳು ಕಾಫಿ ತೋಟದ ಸುತ್ತಮುತ್ತವೇ ಬೀಡು ಬಿಟ್ಟಿವೆ. ಇದರಿಂದ ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರು ಓಡಾಡುವುದು ಕಷ್ಟವಾಗಿದೆ. ಆನೆಗಳನ್ನು ಸ್ಥಳದಿಂದ ಓಡಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ (Forest Department) ಒತ್ತಾಯಿಸಿದ್ದಾರೆ.  ಈ ಭಾಗದಲ್ಲಿ ಕಳೆದ ಎರಡು ತಿಂಗಳಲ್ಲಿ ಆನೆ ದಾಳಿಗೆ ಇದು ಎರಡನೇ ಬಲಿಯಾಗಿದೆ. ಆಲ್ದೂರು ಅರಣ್ಯ ಇಲಾಖೆ ಮುಂದೆ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಮಧ್ಯಾಹ್ನ ನಾಗರಹೊಳೆಯಿಂದ ಆನೆ ಹಿಡಿಯಲು ಕುಮ್ಕಿ ಆನೆಗಳ ತಂಡ ಆಗಮಿಸಲಿದೆ.

The incident in which a woman was killed in a forest attack took place in Hededalu village near Aldur in the district. Six people had left for coffee plantation work on Wednesday morning. Four young women were sitting together to eat the breakfast they had taken from home before starting work. Everyone ran when they saw the elephant that came. However, Veena (45) could not escape. An elephant stepped on Meena's head. The woman was seriously injured and died on the spot.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

3 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

3 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

21 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago