Advertisement
MIRROR FOCUS

ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಿಲ್ಲದ ಕಾಡಾನೆ ದಾಳಿ | ಹೆಡದಾಳುವಿನಲ್ಲಿ ಕಾಡಾನೆ ದಾಳಿಗೆ ಯುವತಿ ಬಲಿ | ಸ್ಥಳೀಯರಿಂದ ಪ್ರತಿಭಟನೆ

Share

ಕಾಡಾನೆ (Elephant) ದಾಳಿಗೆ ಮಹಿಳೆ (Woman) ಬಲಿಯಾದ ಘಟನೆ ಜಿಲ್ಲೆಯ ಆಲ್ದೂರು ಸಮೀಪದ ಹೆಡೆದಾಳು ಗ್ರಾಮದಲ್ಲಿ ನಡೆದಿದೆ. ಗಾಳಿಗುಂಡಿ ಗ್ರಾಮದಿಂದ ಹೆಡದಾಳು ಗುಡ್ಡದಕೆರೆ ಬಳಿಯ ಕಾಫಿ ತೋಟದ ಕೆಲಸಕ್ಕೆ ಬುಧವಾರ ಬೆಳಿಗ್ಗೆಯೇ ಆರು ಮಂದಿ ತೆರಳಿದ್ದರು. ಮನೆಯಿಂದ ತೆಗೆದುಕೊಂಡು ಹೋಗಿದ್ದ ಉಪಾಹಾರವನ್ನು ಕೆಲಸ ಆರಂಭಿಸುವ ಮೊದಲೆ ತಿನ್ನಲು ಒಟ್ಟಿಗೆ ನಾಲ್ವರು ಯುವತಿಯರು ಕುಳಿತಿದ್ದರು.ಈ ಸಂದರ್ಭದಲ್ಲಿ ಬಂದ ಆನೆಯನ್ನು ನೋಡಿದ ಎಲ್ಲರೂ ಓಡಿದರು. ಆದರೆ, ವೀಣಾ(45) ಅವರು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ವೀಣಾ ಅವರ ತಲೆಯ ಮೇಲೆ ಆನೆ ಕಾಲಿಟ್ಟಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತದೇಹ ನೋಡಿದ ಮತ್ತೊಬ್ಬ ಮಹಿಳೆ ಚಂದ್ರಿ(52) ಆಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದು, ಅವರನ್ನು ಆಲ್ಲೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವಿವಾಹಿತ ಮೀನಾ ಅವರೇ ದುಡಿದು ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಕಿರಿಯ ಸಹೋದರಿಯನ್ನು ಮದುವೆ ಕೂಡ ಮಾಡಿದ್ದರು. ಕಿರಿಯ ಸಹೋದರ ಮತ್ತು ತಂದೆಗೆ ವೀಣಾ ಅವರ ದುಡಿಮೆಯೇ ಆಧಾರವಾಗಿತ್ತು. ಕಾಫಿ ಹಣ್ಣು ಕೊಯ್ದು ಕಾಲ ಆಗಿರುವುದರಿಂದ ಬೆಳಿಗ್ಗೆ ಏಳು ಗಂಟೆಯಷ್ಟರಲ್ಲೇ ಕೆಲಸಕ್ಕೆ ಹೋಗಿದ್ದರು.

ಕಳೆದ ಕೆಲವು ದಿನಗಳಿಂದ ಸುಮಾರು 7 ಕಾಡಾನೆಗಳು ಕಾಫಿ ತೋಟದ ಸುತ್ತಮುತ್ತವೇ ಬೀಡು ಬಿಟ್ಟಿವೆ. ಇದರಿಂದ ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರು ಓಡಾಡುವುದು ಕಷ್ಟವಾಗಿದೆ. ಆನೆಗಳನ್ನು ಸ್ಥಳದಿಂದ ಓಡಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ (Forest Department) ಒತ್ತಾಯಿಸಿದ್ದಾರೆ.  ಈ ಭಾಗದಲ್ಲಿ ಕಳೆದ ಎರಡು ತಿಂಗಳಲ್ಲಿ ಆನೆ ದಾಳಿಗೆ ಇದು ಎರಡನೇ ಬಲಿಯಾಗಿದೆ. ಆಲ್ದೂರು ಅರಣ್ಯ ಇಲಾಖೆ ಮುಂದೆ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಮಧ್ಯಾಹ್ನ ನಾಗರಹೊಳೆಯಿಂದ ಆನೆ ಹಿಡಿಯಲು ಕುಮ್ಕಿ ಆನೆಗಳ ತಂಡ ಆಗಮಿಸಲಿದೆ.

The incident in which a woman was killed in a forest attack took place in Hededalu village near Aldur in the district. Six people had left for coffee plantation work on Wednesday morning. Four young women were sitting together to eat the breakfast they had taken from home before starting work. Everyone ran when they saw the elephant that came. However, Veena (45) could not escape. An elephant stepped on Meena's head. The woman was seriously injured and died on the spot.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

15 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

22 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

22 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago