Advertisement
MIRROR FOCUS

ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷೆ | ಹಲವು ಜಿಲ್ಲೆಗಳಲ್ಲಿ ಪೂರ್ಣಗೊಳ್ಳದ ಸಮೀಕ್ಷೆ

Share

ರಾಜ್ಯದಲ್ಲಿ ನಡೆಯುತ್ತಿರುವ  ಶೈಕ್ಷಣಿಕ,  ಸಾಮಾಜಿಕ, ಆರ್ಥಿಕ ಸಮೀಕ್ಷೆ ಇನ್ನು ಹಲವು ಜಿಲ್ಲೆಗಳಲ್ಲಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ   ಸರ್ಕಾರಿ ಮತ್ತು ಅನುದಾನಿತ  ಶಾಲೆಗಳಿಗೆ ಅ.18 ರವರೆಗೆ  ರಜೆ  ವಿಸ್ತರಿಸಲಾಗಿದ್ದು,  ಅಷ್ಟರೊಳಗೆ  ಸಮೀಕ್ಷೆ ಕಾರ್ಯ ಮುಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್  22ರಿಂದ ಸಮೀಕ್ಷಾ ಕಾರ್ಯ ಆರಂಭವಾಗಿದ್ದು, ಇಂದಿಗೆ  ಪೂರ್ಣಗೊಳ್ಳಬೇಕಾಗಿತ್ತು. ಹಲವು ಜಿಲ್ಲೆಗಳಲ್ಲಿ ಸಮೀಕ್ಷಾ ಕಾರ್ಯ ಅಪೂರ್ಣವಾಗಿರುವ ಹಿನ್ನೆಲೆಯಲ್ಲಿ ಶಿಕ್ಷಕರ ಸಂಘದ  ಮನವಿಯ ಮೇರೆಗೆ ರಜೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಹೇಳಿದರು.  ಕೊಪ್ಪಳ ಜಿಲ್ಲೆಯಲ್ಲಿ ಶೇಕಡ  97ರಷ್ಟು ಸಮೀಕ್ಷಾ ಕಾರ್ಯ ಪೂರ್ಣಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ   67, ಉಡುಪಿಯಲ್ಲಿ ಶೇಕಡ  63 ರಷ್ಟು  ಸಮೀಕ್ಷೆ ನಡೆದಿದೆ.  ಒಂದು 1.20 ಲಕ್ಷದ  ಶಿಕ್ಷಕರು  ಹಾಗೂ ಇತರೆ  ಇಲಾಖೆಗಳ  40 ಸಾವಿರ ಸಿಬ್ಬಂದಿ  ಗಣತಿ ಕಾರ್ಯದಲ್ಲಿ ತೊಡಗಿದ್ದಾರೆ. ಹೆಚ್ಚುವರಿಯಾಗಿ 10 ದಿನಗಳ ಕಾಲ ಕಾಲಾವಕಾಶ ನೀಡಿರುವುದರಿಂದ  8 ಕೆಲಸದ ದಿನ ಸಿಗಲಿದೆ.  ದ್ವಿತೀಯ ಪಿಯುಸಿ ಮಧ್ಯಂತರ  ಪರೀಕ್ಷಾ ಕಾರ್ಯದಲ್ಲಿ ತೊಡಗಿಕೊಂಡಿರುವ ಉಪನ್ಯಾಸಕರಿಗೆ ಗಣತಿ ಕಾರ್ಯದಿಂದ ವಿನಾಯತಿ ನೀಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ  6 700 ಶಿಕ್ಷಕರು ಗಣತಿ ಕಾರ್ಯದಲ್ಲಿ  ತೊಡಗಿಕೊಂಡಿದ್ದು, 46 ಲಕ್ಷ  ಮನೆಗಳನ್ನು ಸಮೀಕ್ಷೆ  ಮಾಡಬೇಕಾಗಿದೆ. ದಿನವೊಂದಕ್ಕೆ ಪ್ರತಿ ಶಿಕ್ಷಕರಿಗೆ 10ರಿಂದ 15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ ಎಂದರು.  ಸಮೀಕ್ಷಾ ಕಾರ್ಯ ನಡೆಯುವ ಸಂದರ್ಭದಲ್ಲಿ ಮೂರು ಮಂದಿ ಶಿಕ್ಷಕರು ಮೃತಪಟ್ಟಿದ್ದು ಅವರಿಗೆ ತಲಾ  20 ಲಕ್ಷ ಪರಿಹಾರ ನೀಡಲಾಗುವುದು. ಸಮೀಕ್ಷಾ ಕಾರ್ಯದಲ್ಲಿ ತೊಡಗಿಕೊಳ್ಳಲು ಹಿಂದೇಟು ಹಾಕುವ ಗಣತಿದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

11 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

15 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago