ಪಶುಸಂಗೋಪನಾ ಇಲಾಖೆಯಡಿ ಕಾರ್ಯನಿರ್ವಹಿಸುವ ಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದ ಗ್ರಾಮಾಂತರ ಭಾಗದಲ್ಲಿ ಪಶು ಸಖಿಯರ ಅವರ ಸೇವೆ ಶ್ಲಾಘನೀಯ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕ ಒಕ್ಕೂಟ ಲಾಭದಲ್ಲಿದೆ. ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್ಗೆ ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪಶುಸಖಿಯರನ್ನು ಕೇಂದ್ರ ಸರ್ಕಾರದಿಂದ ನೇಮಕ ಮಾಡಲಾಗಿದ್ದು, ಅವರು ಇಲಾಖೆ ಮತ್ತು ರೈತರ ನಡುವೆ ಕೊಂಡಿಯಾಗಿ ಉತ್ತಮ ರೀತಿಯಲ್ಲಿ ಜವಾಬ್ದಾರಿಯುತವಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಶುಸಖಿಯರು ಗ್ರಾಮೀಣ ಪ್ರದೇಶದಲ್ಲಿ ರೈತರ ಮನೆ ಬಾಗಿಲಿಗೆ ಹೋಗಿ ಜಾನುವಾರುಗಳಿಗೆ ಕೃತಕ ಗರ್ಭಧಾರಣೆ ಮತ್ತು ಜಾನುವಾರ ನಿರ್ವಹಣಾ ಸೇವೆಗಳನ್ನು ಮತ್ತು ಮಾಹಿತಿಯನ್ನು ನೀಡುತ್ತಿದ್ದಾರೆ. ಪಶುಸಖಿಯರಿಗೆ ಕಡಿಮೆ ಗೌರವಧನ ನೀಡಲಾಗುತ್ತಿದ್ದು , ಅವರಿಗೆ ಕನಿಷ್ಠ 5000 ರೂ ಗೌರವಧನ ಹೆಚ್ಚಳ ಮಾಡಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಾಗುತ್ತದೆ ಎಂದು ಅವರು ಹೇಳಿದರು. ಈ ನಿಟ್ಟಿನಲ್ಲಿ ಪಶು ಸಖಿಯರಿಗೆ ನೀಡುವ ಗೌರವ ಧನದ ಹೆಚ್ಚಳದ ಬಗ್ಗೆ ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟ 3.40 ಲೀಟರ್ ಲಕ್ಷ ಹಾಲು ಉತ್ಪಾದನೆ ಮಾಡುತ್ತಿದ್ದು, ಹೆಚ್ಚುವರಿಯಾಗಿ 1.60 ಲೀ. ಲಕ್ಷ ಹಾಲನ್ನು ಇತರ ಜಿಲ್ಲೆಗಳಿಂದ ಆಮದು ಮಾಡುತ್ತಿದೆ. ಹಾಲು ಉತ್ಪಾದನೆಗಿಂತಲೂ ಖರ್ಚು ಮಾಡಿ ಉತ್ತಮ ಲಾಭಗಳಿಸಿದೆ. ಮೈಸೂರಿನಲ್ಲಿ ಶೇಕಡಾ 40 ರಷ್ಟು ಹಾಲು ಖರ್ಚಾಗುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟ ಉತ್ತಮ ನಿರ್ವಹಣೆ ಮಾಡುತ್ತಿದೆ ಎಂದು ಸಚಿವರು ಹೇಳಿದರು.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…