ಪಶುಸಂಗೋಪನಾ ಇಲಾಖೆಯಡಿ ಕಾರ್ಯನಿರ್ವಹಿಸುವ ಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದ ಗ್ರಾಮಾಂತರ ಭಾಗದಲ್ಲಿ ಪಶು ಸಖಿಯರ ಅವರ ಸೇವೆ ಶ್ಲಾಘನೀಯ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕ ಒಕ್ಕೂಟ ಲಾಭದಲ್ಲಿದೆ. ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್ಗೆ ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪಶುಸಖಿಯರನ್ನು ಕೇಂದ್ರ ಸರ್ಕಾರದಿಂದ ನೇಮಕ ಮಾಡಲಾಗಿದ್ದು, ಅವರು ಇಲಾಖೆ ಮತ್ತು ರೈತರ ನಡುವೆ ಕೊಂಡಿಯಾಗಿ ಉತ್ತಮ ರೀತಿಯಲ್ಲಿ ಜವಾಬ್ದಾರಿಯುತವಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಶುಸಖಿಯರು ಗ್ರಾಮೀಣ ಪ್ರದೇಶದಲ್ಲಿ ರೈತರ ಮನೆ ಬಾಗಿಲಿಗೆ ಹೋಗಿ ಜಾನುವಾರುಗಳಿಗೆ ಕೃತಕ ಗರ್ಭಧಾರಣೆ ಮತ್ತು ಜಾನುವಾರ ನಿರ್ವಹಣಾ ಸೇವೆಗಳನ್ನು ಮತ್ತು ಮಾಹಿತಿಯನ್ನು ನೀಡುತ್ತಿದ್ದಾರೆ. ಪಶುಸಖಿಯರಿಗೆ ಕಡಿಮೆ ಗೌರವಧನ ನೀಡಲಾಗುತ್ತಿದ್ದು , ಅವರಿಗೆ ಕನಿಷ್ಠ 5000 ರೂ ಗೌರವಧನ ಹೆಚ್ಚಳ ಮಾಡಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲಾಗುತ್ತದೆ ಎಂದು ಅವರು ಹೇಳಿದರು. ಈ ನಿಟ್ಟಿನಲ್ಲಿ ಪಶು ಸಖಿಯರಿಗೆ ನೀಡುವ ಗೌರವ ಧನದ ಹೆಚ್ಚಳದ ಬಗ್ಗೆ ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟ 3.40 ಲೀಟರ್ ಲಕ್ಷ ಹಾಲು ಉತ್ಪಾದನೆ ಮಾಡುತ್ತಿದ್ದು, ಹೆಚ್ಚುವರಿಯಾಗಿ 1.60 ಲೀ. ಲಕ್ಷ ಹಾಲನ್ನು ಇತರ ಜಿಲ್ಲೆಗಳಿಂದ ಆಮದು ಮಾಡುತ್ತಿದೆ. ಹಾಲು ಉತ್ಪಾದನೆಗಿಂತಲೂ ಖರ್ಚು ಮಾಡಿ ಉತ್ತಮ ಲಾಭಗಳಿಸಿದೆ. ಮೈಸೂರಿನಲ್ಲಿ ಶೇಕಡಾ 40 ರಷ್ಟು ಹಾಲು ಖರ್ಚಾಗುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟ ಉತ್ತಮ ನಿರ್ವಹಣೆ ಮಾಡುತ್ತಿದೆ ಎಂದು ಸಚಿವರು ಹೇಳಿದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…