Advertisement
ಸುದ್ದಿಗಳು

ಬೆಳೆಹಾನಿ ನಷ್ಟ ಪರಿಹಾರ ಹೆಚ್ಚಿಸಿ | ಕೇಂದ್ರಕ್ಕೆ ಮನವಿ ಮಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ

Share

ಹೆಚ್ಚಾಗಿ ಮಳೆ ಬಂದ್ರೆ ಅತಿವೃಷ್ಠಿ, ಮಳೆ ಬಾರದೆ ಹೋದ್ರೆ ಅನಾವೃಷ್ಠಿ. ರೈತನಿಗೆ ಒಂದಲ್ಲ ಒಂದು ಸಂಕಷ್ಟ ತಪ್ಪಿದ್ದಲ್ಲ. ರೈತ ನಷ್ಟ ಅನುಭವಿಸಿದ್ದಲ್ಲಿ ಸರ್ಕಾರಗಳು ಬೆನ್ನೆಲುಬಾಗಿ ನಿಲ್ಲಬೇಕು. ಅದು ಅಷ್ಟಕ್ಕಷ್ಟೆ. ಬಂದ್ರೆ ಬಂತು.. ಇಲ್ಲ ಅಂದರೆ ಇಲ್ಲಾ. ಈ ಎಲ್ಲಾ ಕಾರಣಗಳಿಂದ ಈ ಬಾರಿ ಬಾರಿ ಬರ ಮತ್ತು ಮಳೆಹಾನಿ ಪರಿಹಾರ ಮೊತ್ತ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement

ಬಿಪೊರ್ ಜಾಯ್  ಚಂಡಮಾರುತದ ಬಗ್ಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ನಡೆಸಿದ ಸಭೆಯ ನಂತರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳೆಹಾನಿ, ಮಳೆ ಆಶ್ರಿತ ಭೂಮಿಯಲ್ಲಿ ಬೆಳೆಹಾನಿ, ನೀರಾವರಿ ಭೂಮಿ ತೋಟಗಾರಿಕೆ ಬೆಳೆಹಾನಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿವುಂತೆ ಮನವಿ ಮಾಡಿದ್ದಾಗಿ ತಿಳಿಸಿದರು.

Advertisement

ಸಭೆಯಲ್ಲಿ ಕರ್ನಾಟಕದ ಪರವಾಗಿ ಮೂರು ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದೆ. ಮಳೆ ಹಾನಿ, ಬೆಳೆ ಪರಿಹಾರ ಮೊತ್ತವೂ ಕಡಿಮೆ ಇದೆ. ರಾಜ್ಯ ಸರ್ಕಾರ ಕೈಯಿಂದ ಹಣ ಹಾಕುತ್ತಿದೆ, ಇದು ಹೊರೆಯಾಗುತ್ತಿದೆ. ಹೀಗಾಗಿ ಬರ ಮತ್ತು ಮಳೆಹಾನಿ ಪರಿಹಾರ ಮೊತ್ತ ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದೇನೆ. ಕರ್ನಾಟಕದ ಎಸ್‌ಡಿಆರ್‌ಎಫ್​​ಗೆ ಈಗಾಗಲೇ ಅನುದಾನ ಕಡಿಮೆ ಬರುತ್ತಿದೆ. ಈ ಹಿನ್ನೆಲೆ ಪರಿಷ್ಕರಣೆಯಾಗಬೇಕು ಎಂದು ಒತ್ತಾಯಿಸಿದ್ದೇನೆ ಎಂದು ಹೇಳಿದರು.

ಪ್ರಕೃತಿ ವಿಕೋಪಗಳ ಬಗ್ಗೆ ಹೆಚ್ಚು ಮುಂಜಾಗ್ರತೆ ವಹಿಸಬೇಕು. ಈ ಹಿನ್ನಲೆ ಚರ್ಚೆ ಮಾಡಲು ಇಂದು ಸಭೆ ನಡೆಸಲಾಯಿತು. ಕೇಂದ್ರ ಸರ್ಕಾರದ ಕೆಲವು ಮಾನದಂಡಗಳನ್ನು ಪಾಲಿಸಲು ಸೂಚಿಸಿದೆ. ಅಕ್ಟೋಬರ್​ನಲ್ಲಿ ಕೇಂದ್ರ ಸರ್ಕಾರ ಪಕೃತಿ ವಿಕೋಪ ಮಾರ್ಗಸೂಚಿಯಲ್ಲಿ ನಿಯಮ ಬದಲಾಯಿಸಿದೆ. ಸರ್ಕಾರ ನೀಡುವ ಪರಿಹಾರ ಮೊತ್ತದಲ್ಲಿ ವಿಮಾ ಕಂಪನಿಗಳು ವಿಮಾ ಮೊತ್ತವನ್ನು ಕಡಿತ ಗೊಳಿಸಿ ನೀಡುವ ನಿಯಮವನ್ನು ತೆಗೆದು ಹಾಕಬೇಕು. ಇದರಿಂದ ರೈತರು ಮತ್ತು ಸರ್ಕಾರಕ್ಕೆ ನಷ್ಟವಾಗುತ್ತಿದ್ದು ವಿಮಾ ಕಂಪನಿಗಳಿಗೆ ಲಾಭವಾಗುತ್ತಿದೆ ಎಂದರು.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

10 hours ago

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…

21 hours ago

ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…

21 hours ago

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ

ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…

21 hours ago

ಮಹಾಕುಂಭದಿಂದ ನಿರ್ಗಮಿಸಲು ವಿಶೇಷ ರೈಲು ಸಂಚಾರ | ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲು ಓಡಾಟ

ರೈಲ್ವೆ ಇಲಾಖೆ ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

21 hours ago

ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

ಮ್ಯಾನ್ಮಾರ್‌ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…

22 hours ago