Advertisement
ಸುದ್ದಿಗಳು

ಬೆಳೆಹಾನಿ ನಷ್ಟ ಪರಿಹಾರ ಹೆಚ್ಚಿಸಿ | ಕೇಂದ್ರಕ್ಕೆ ಮನವಿ ಮಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ

Share

ಹೆಚ್ಚಾಗಿ ಮಳೆ ಬಂದ್ರೆ ಅತಿವೃಷ್ಠಿ, ಮಳೆ ಬಾರದೆ ಹೋದ್ರೆ ಅನಾವೃಷ್ಠಿ. ರೈತನಿಗೆ ಒಂದಲ್ಲ ಒಂದು ಸಂಕಷ್ಟ ತಪ್ಪಿದ್ದಲ್ಲ. ರೈತ ನಷ್ಟ ಅನುಭವಿಸಿದ್ದಲ್ಲಿ ಸರ್ಕಾರಗಳು ಬೆನ್ನೆಲುಬಾಗಿ ನಿಲ್ಲಬೇಕು. ಅದು ಅಷ್ಟಕ್ಕಷ್ಟೆ. ಬಂದ್ರೆ ಬಂತು.. ಇಲ್ಲ ಅಂದರೆ ಇಲ್ಲಾ. ಈ ಎಲ್ಲಾ ಕಾರಣಗಳಿಂದ ಈ ಬಾರಿ ಬಾರಿ ಬರ ಮತ್ತು ಮಳೆಹಾನಿ ಪರಿಹಾರ ಮೊತ್ತ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ.

ಬಿಪೊರ್ ಜಾಯ್  ಚಂಡಮಾರುತದ ಬಗ್ಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ನಡೆಸಿದ ಸಭೆಯ ನಂತರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳೆಹಾನಿ, ಮಳೆ ಆಶ್ರಿತ ಭೂಮಿಯಲ್ಲಿ ಬೆಳೆಹಾನಿ, ನೀರಾವರಿ ಭೂಮಿ ತೋಟಗಾರಿಕೆ ಬೆಳೆಹಾನಿಗೆ ನೀಡುತ್ತಿರುವ ಪರಿಹಾರವನ್ನು ಹೆಚ್ಚಿವುಂತೆ ಮನವಿ ಮಾಡಿದ್ದಾಗಿ ತಿಳಿಸಿದರು.

ಸಭೆಯಲ್ಲಿ ಕರ್ನಾಟಕದ ಪರವಾಗಿ ಮೂರು ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದೆ. ಮಳೆ ಹಾನಿ, ಬೆಳೆ ಪರಿಹಾರ ಮೊತ್ತವೂ ಕಡಿಮೆ ಇದೆ. ರಾಜ್ಯ ಸರ್ಕಾರ ಕೈಯಿಂದ ಹಣ ಹಾಕುತ್ತಿದೆ, ಇದು ಹೊರೆಯಾಗುತ್ತಿದೆ. ಹೀಗಾಗಿ ಬರ ಮತ್ತು ಮಳೆಹಾನಿ ಪರಿಹಾರ ಮೊತ್ತ ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದೇನೆ. ಕರ್ನಾಟಕದ ಎಸ್‌ಡಿಆರ್‌ಎಫ್​​ಗೆ ಈಗಾಗಲೇ ಅನುದಾನ ಕಡಿಮೆ ಬರುತ್ತಿದೆ. ಈ ಹಿನ್ನೆಲೆ ಪರಿಷ್ಕರಣೆಯಾಗಬೇಕು ಎಂದು ಒತ್ತಾಯಿಸಿದ್ದೇನೆ ಎಂದು ಹೇಳಿದರು.

ಪ್ರಕೃತಿ ವಿಕೋಪಗಳ ಬಗ್ಗೆ ಹೆಚ್ಚು ಮುಂಜಾಗ್ರತೆ ವಹಿಸಬೇಕು. ಈ ಹಿನ್ನಲೆ ಚರ್ಚೆ ಮಾಡಲು ಇಂದು ಸಭೆ ನಡೆಸಲಾಯಿತು. ಕೇಂದ್ರ ಸರ್ಕಾರದ ಕೆಲವು ಮಾನದಂಡಗಳನ್ನು ಪಾಲಿಸಲು ಸೂಚಿಸಿದೆ. ಅಕ್ಟೋಬರ್​ನಲ್ಲಿ ಕೇಂದ್ರ ಸರ್ಕಾರ ಪಕೃತಿ ವಿಕೋಪ ಮಾರ್ಗಸೂಚಿಯಲ್ಲಿ ನಿಯಮ ಬದಲಾಯಿಸಿದೆ. ಸರ್ಕಾರ ನೀಡುವ ಪರಿಹಾರ ಮೊತ್ತದಲ್ಲಿ ವಿಮಾ ಕಂಪನಿಗಳು ವಿಮಾ ಮೊತ್ತವನ್ನು ಕಡಿತ ಗೊಳಿಸಿ ನೀಡುವ ನಿಯಮವನ್ನು ತೆಗೆದು ಹಾಕಬೇಕು. ಇದರಿಂದ ರೈತರು ಮತ್ತು ಸರ್ಕಾರಕ್ಕೆ ನಷ್ಟವಾಗುತ್ತಿದ್ದು ವಿಮಾ ಕಂಪನಿಗಳಿಗೆ ಲಾಭವಾಗುತ್ತಿದೆ ಎಂದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

5 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

6 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago