ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ ಯೋಜನೆಗಳ ಕುರಿತ ಪರಿಶೀಲನಾ ಸಭೆ ನಡೆಯಿತು.ಮೀನು ಸೇರಿದಂತೆ ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಮೀನುಗಾರಿಕಾ ಸಚಿವ ರಾಜೀವ್ ರಂಜನ್ ಸಿಂಗ್, ಪ್ರಧಾನಿ ಅವರ ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಮತ್ತು ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.ಸಭೆಯಲ್ಲಿ ಆಳ ಸಮುದ್ರದ ಮೀನುಗಾರಿಕೆ, ಮತ್ಸ್ಯೋದ್ಯಮ ಅಭಿವೃದ್ಧಿ ಯೋಜನೆಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪ್ರಧಾನಿ ಅವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು. ಬಳಿಕ ಪ್ರಧಾನಿ, ಮೀನು ಸೇರಿದಂತೆ ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಮೀನುಗಾರಿಕೆ ಸಚಿವಾಲಯದಿಂದ ಕಳೆದ ತಿಂಗಳು 28ರಂದು 255 ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಪ್ರಕಟಿಸಿದ ನಂತರ ಈ ಮಹತ್ವದ ಸಭೆ ನಡೆದಿದೆ.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…