Advertisement
MIRROR FOCUS

ಕೃಷಿ ಉತ್ಪಾದನೆ  ಹೆಚ್ಚಳ | ರೈತರ ಸಮಗ್ರ ವಿಕಾಸಕ್ಕೆ ಆದ್ಯತೆ

Share

2014ರಿಂದ 2024 ರ ಅವಧಿಯಲ್ಲಿ ದೇಶದ ಕೃಷಿ ಉತ್ಪಾದನೆ ಶೇಕಡ 44 ರಷ್ಟು ಭಾರಿ ಏರಿಕೆ ಕಂಡಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್  ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಅವರು, ಕೃಷಿ ಮತ್ತು ರೈತರ ಸಮಗ್ರ ವಿಕಾಸಕ್ಕಾಗಿ 6 ಅಂಶಗಳ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದರ್ಶಿ ಪರಿಕಲ್ಪನೆಗಳ ಅನುಸಾರ ಭಾರತ, ಎಲ್ಲ ವಲಯಗಳಲ್ಲಿ ಅತ್ಯಂತ ಸಮೃದ್ಧ, ವಿಕಸಿತ, ಶಕ್ತಿಶಾಲಿ ಮತ್ತು ಗೌರವಶಾಲಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ ಎಂದರು.  ಪಿಎಂ-ಕಿಸಾನ್ ಸಮ್ಮಾನ್ ಯೋಜನೆ ಸಣ್ಣ ರೈತರಿಗೆ ವರದಾನವಾಗಿದ್ದು, ಇದರಡಿ ಒಟ್ಟು 4 ಲಕ್ಷ 9 ಸಾವಿರ ಕೋಟಿ ರೂಪಾಯಿ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ರಸಗೊಬ್ಬರ ಸಹಾಯಧನವಾಗಿ ನೀಡಲಾಗಿದೆ. ಫಸಲ್ ಬಿಮಾ ಯೋಜನೆಯಡಿ 1 ಲಕ್ಷ 90 ಸಾವಿರ ಕೋಟಿ ರೂಪಾಯಿ ನೀಡಲಾಗಿದೆ ಎಂದು ತಿಳಿಸಿದರು. ಪೌಷ್ಟಿಕ ಆಹಾರಧಾನ್ಯವಾದ ಬೇಳೆಕಾಳು ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ತೊಗರಿ, ಉದ್ದಿನಬೇಳೆ, ಮಸೂರ್ ದಾಲ್ ಸೇರಿದಂತೆ ವಿವಿಧ ಬೇಳೆಕಾಳುಗಳ ಉತ್ಪಾದನೆಯನ್ನು ಬೆಂಬಲ ಬೆಲೆ ಮೂಲಕ ಶೇಕಡ 100ರಷ್ಟು ಖರೀದಿಸಲಾಗುತ್ತಿದೆ. ಬೇಳೆಕಾಳು ಮಿಷನ್ ಸ್ಥಾಪಿಸಲಾಗಿದ್ದು, ದೇಶೀಯ ಬೇಳೆಕಾಳು ಬೆಳೆಗಾರರ ಹಿತರಕ್ಷಣೆಗಾಗಿ ಆಮದು ಬೇಳೆಕಾಳುಗಳ ಮೇಲೆ ಸುಂಕ ವಿಧಿಸಲಾಗುತ್ತಿದೆ ಎಂದು ತಿಳಿಸಿದರು.  ಇತ್ತೀಚೆಗೆ ಕರ್ನಾಟಕದ ಸಂಸದರ ನಿಯೋಗ ತಮ್ಮನ್ನು ಭೇಟಿಯಾಗಿ ತೊಗರಿಬೇಳೆ ಖರೀದಿಗೆ ಬೇಡಿಕೆ ಸಲ್ಲಿಸಿದೆ. ಅಲ್ಲಿನ ಸರ್ಕಾರ ಮಂಡಿಸಿದ ಖರೀದಿ ಬೇಡಿಕೆಯನ್ನು ಅನುಮೋದಿಸಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

14 hours ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 days ago