2014ರಿಂದ 2024 ರ ಅವಧಿಯಲ್ಲಿ ದೇಶದ ಕೃಷಿ ಉತ್ಪಾದನೆ ಶೇಕಡ 44 ರಷ್ಟು ಭಾರಿ ಏರಿಕೆ ಕಂಡಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಅವರು, ಕೃಷಿ ಮತ್ತು ರೈತರ ಸಮಗ್ರ ವಿಕಾಸಕ್ಕಾಗಿ 6 ಅಂಶಗಳ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದರ್ಶಿ ಪರಿಕಲ್ಪನೆಗಳ ಅನುಸಾರ ಭಾರತ, ಎಲ್ಲ ವಲಯಗಳಲ್ಲಿ ಅತ್ಯಂತ ಸಮೃದ್ಧ, ವಿಕಸಿತ, ಶಕ್ತಿಶಾಲಿ ಮತ್ತು ಗೌರವಶಾಲಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ ಎಂದರು. ಪಿಎಂ-ಕಿಸಾನ್ ಸಮ್ಮಾನ್ ಯೋಜನೆ ಸಣ್ಣ ರೈತರಿಗೆ ವರದಾನವಾಗಿದ್ದು, ಇದರಡಿ ಒಟ್ಟು 4 ಲಕ್ಷ 9 ಸಾವಿರ ಕೋಟಿ ರೂಪಾಯಿ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ರಸಗೊಬ್ಬರ ಸಹಾಯಧನವಾಗಿ ನೀಡಲಾಗಿದೆ. ಫಸಲ್ ಬಿಮಾ ಯೋಜನೆಯಡಿ 1 ಲಕ್ಷ 90 ಸಾವಿರ ಕೋಟಿ ರೂಪಾಯಿ ನೀಡಲಾಗಿದೆ ಎಂದು ತಿಳಿಸಿದರು. ಪೌಷ್ಟಿಕ ಆಹಾರಧಾನ್ಯವಾದ ಬೇಳೆಕಾಳು ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ತೊಗರಿ, ಉದ್ದಿನಬೇಳೆ, ಮಸೂರ್ ದಾಲ್ ಸೇರಿದಂತೆ ವಿವಿಧ ಬೇಳೆಕಾಳುಗಳ ಉತ್ಪಾದನೆಯನ್ನು ಬೆಂಬಲ ಬೆಲೆ ಮೂಲಕ ಶೇಕಡ 100ರಷ್ಟು ಖರೀದಿಸಲಾಗುತ್ತಿದೆ. ಬೇಳೆಕಾಳು ಮಿಷನ್ ಸ್ಥಾಪಿಸಲಾಗಿದ್ದು, ದೇಶೀಯ ಬೇಳೆಕಾಳು ಬೆಳೆಗಾರರ ಹಿತರಕ್ಷಣೆಗಾಗಿ ಆಮದು ಬೇಳೆಕಾಳುಗಳ ಮೇಲೆ ಸುಂಕ ವಿಧಿಸಲಾಗುತ್ತಿದೆ ಎಂದು ತಿಳಿಸಿದರು. ಇತ್ತೀಚೆಗೆ ಕರ್ನಾಟಕದ ಸಂಸದರ ನಿಯೋಗ ತಮ್ಮನ್ನು ಭೇಟಿಯಾಗಿ ತೊಗರಿಬೇಳೆ ಖರೀದಿಗೆ ಬೇಡಿಕೆ ಸಲ್ಲಿಸಿದೆ. ಅಲ್ಲಿನ ಸರ್ಕಾರ ಮಂಡಿಸಿದ ಖರೀದಿ ಬೇಡಿಕೆಯನ್ನು ಅನುಮೋದಿಸಲಾಗಿದೆ ಎಂದು ತಿಳಿಸಿದರು.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…