Advertisement
MIRROR FOCUS

ಕೃಷಿ ಉತ್ಪಾದನೆ  ಹೆಚ್ಚಳ | ರೈತರ ಸಮಗ್ರ ವಿಕಾಸಕ್ಕೆ ಆದ್ಯತೆ

Share

2014ರಿಂದ 2024 ರ ಅವಧಿಯಲ್ಲಿ ದೇಶದ ಕೃಷಿ ಉತ್ಪಾದನೆ ಶೇಕಡ 44 ರಷ್ಟು ಭಾರಿ ಏರಿಕೆ ಕಂಡಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್  ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಅವರು, ಕೃಷಿ ಮತ್ತು ರೈತರ ಸಮಗ್ರ ವಿಕಾಸಕ್ಕಾಗಿ 6 ಅಂಶಗಳ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದರ್ಶಿ ಪರಿಕಲ್ಪನೆಗಳ ಅನುಸಾರ ಭಾರತ, ಎಲ್ಲ ವಲಯಗಳಲ್ಲಿ ಅತ್ಯಂತ ಸಮೃದ್ಧ, ವಿಕಸಿತ, ಶಕ್ತಿಶಾಲಿ ಮತ್ತು ಗೌರವಶಾಲಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ ಎಂದರು.  ಪಿಎಂ-ಕಿಸಾನ್ ಸಮ್ಮಾನ್ ಯೋಜನೆ ಸಣ್ಣ ರೈತರಿಗೆ ವರದಾನವಾಗಿದ್ದು, ಇದರಡಿ ಒಟ್ಟು 4 ಲಕ್ಷ 9 ಸಾವಿರ ಕೋಟಿ ರೂಪಾಯಿ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ರಸಗೊಬ್ಬರ ಸಹಾಯಧನವಾಗಿ ನೀಡಲಾಗಿದೆ. ಫಸಲ್ ಬಿಮಾ ಯೋಜನೆಯಡಿ 1 ಲಕ್ಷ 90 ಸಾವಿರ ಕೋಟಿ ರೂಪಾಯಿ ನೀಡಲಾಗಿದೆ ಎಂದು ತಿಳಿಸಿದರು. ಪೌಷ್ಟಿಕ ಆಹಾರಧಾನ್ಯವಾದ ಬೇಳೆಕಾಳು ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ತೊಗರಿ, ಉದ್ದಿನಬೇಳೆ, ಮಸೂರ್ ದಾಲ್ ಸೇರಿದಂತೆ ವಿವಿಧ ಬೇಳೆಕಾಳುಗಳ ಉತ್ಪಾದನೆಯನ್ನು ಬೆಂಬಲ ಬೆಲೆ ಮೂಲಕ ಶೇಕಡ 100ರಷ್ಟು ಖರೀದಿಸಲಾಗುತ್ತಿದೆ. ಬೇಳೆಕಾಳು ಮಿಷನ್ ಸ್ಥಾಪಿಸಲಾಗಿದ್ದು, ದೇಶೀಯ ಬೇಳೆಕಾಳು ಬೆಳೆಗಾರರ ಹಿತರಕ್ಷಣೆಗಾಗಿ ಆಮದು ಬೇಳೆಕಾಳುಗಳ ಮೇಲೆ ಸುಂಕ ವಿಧಿಸಲಾಗುತ್ತಿದೆ ಎಂದು ತಿಳಿಸಿದರು.  ಇತ್ತೀಚೆಗೆ ಕರ್ನಾಟಕದ ಸಂಸದರ ನಿಯೋಗ ತಮ್ಮನ್ನು ಭೇಟಿಯಾಗಿ ತೊಗರಿಬೇಳೆ ಖರೀದಿಗೆ ಬೇಡಿಕೆ ಸಲ್ಲಿಸಿದೆ. ಅಲ್ಲಿನ ಸರ್ಕಾರ ಮಂಡಿಸಿದ ಖರೀದಿ ಬೇಡಿಕೆಯನ್ನು ಅನುಮೋದಿಸಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

52 minutes ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

9 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

12 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

18 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago