ಅಡಿಕೆ ಬೆಲೆ ಏರಿಕೆಯ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸುದ್ದಿಯಾಗುತ್ತಿದೆ. ಭಾರತದಲ್ಲಿ ಅಡಿಕೆ ಕೊರತೆ ಇರುವುದರಿಂದ ಬೇಡಿಕೆ ಬರಲಿದೆ ಎಂದು ಮ್ಯಾನ್ಮಾರ್ ಸೇರಿದಂತೆ ಇತರ ದೇಶಗಳಲ್ಲಿ ಚರ್ಚೆ ಆರಂಭವಾಗಿದೆ. ಈ ವರ್ಷ ಅಡಿಕೆ ಪೂರೈಕೆ ಕಡಿಮೆಯಾಗಿರುವುದರಿಂದ, ವ್ಯಾಪಾರಿಗಳು ಖರೀದಿಗಾಗಿ ಕಾಯುತ್ತಿದ್ದಾರೆ, ಭಾರತ, ಚೀನಾದತಂಹ ದೇಶಗಳಿಗೆ ಅಡಿಕೆ ಬೇಕಾಗಿದೆ ಎಂದು ಅಲ್ಲಿನ ಬೆಳೆಗಾರರಿಗೆ ಮಾಹಿತಿ ನೀಡಲಾಗಿದೆ.
ಚೀನಾ ಹಾಗೂ ಭಾರತದಲ್ಲಿ ಅಡಿಕೆ ಉತ್ಪಾದನೆಯ ಕೊರತೆ ಇರುವುದರಿಂದ ಅಡಿಕೆಗೆ ವಿದೇಶಗಳಿಂದ ಈಗ ಬೇಡಿಕೆ ವ್ಯಕ್ತವಾಗಿದ್ದು, ಈ ವರ್ಷ ಬೆಲೆ ಹೆಚ್ಚಾಗುವ ನಿರೀಕ್ಷೆಯಿದೆ. ಕಳೆದ ವರ್ಷ, ಸೀಮಿತ ಪೂರೈಕೆಯಿಂದಾಗಿ ಅಡಿಕೆ ಬೆಳೆಗಾರರಿಗೆ ನಷ್ಟವಾಗಿತ್ತು. ಈಗಾಗಲೇ ಚೀನಾ ಅಡಿಕೆಗೆ ಬೇಡಿಕೆಯನ್ನು ನೀಡಲು ಪ್ರಾರಂಭಿಸಿದೆ. ಹಿಂದಿನ ವರ್ಷದಂತೆ ಎಳೆಯ ಅಡಿಕೆಗಳನ್ನು ಹೆಚ್ಚಾಗಿ ಮಾರಾಟ ಮಾಡಿದರೆ ಈ ವರ್ಷವೂ ಬೆಲೆ ಏರಿಕೆಯಾಗುತ್ತಲೇ ಇರುತ್ತದೆ. ವರ್ಷವಿಡೀ ಅಡಿಕೆ ಲಭ್ಯವಿರುವುದಿಲ್ಲ, ಆದ್ದರಿಂದ ಈ ವರ್ಷ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನುವುದು ಮ್ಮಾನ್ಮಾರ್ ಬೆಳೆಗಾರರಿಗೆ ನೀಡಿರುವ ಮಾಹಿತಿ. ಹಿಂದಿನ ವರ್ಷಗಳಲ್ಲಿ ಎಳೆಯ ಅಡಿಕೆಗೆ ಚೀನಾದ ಬೇಡಿಕೆ ಹೆಚ್ಚಾದ ಕಾರಣ, ಈ ವರ್ಷ ಒಣಗಿದ ಅಡಿಕೆಯ ಬೆಲೆ ಹೆಚ್ಚಾಗಿದೆ. ಪ್ರಸ್ತುತ, ಸ್ಥಳೀಯ ಮಾರುಕಟ್ಟೆಯಲ್ಲಿ ಪೂರೈಕೆಗಿಂತ ಬೇಡಿಕೆ ಹೆಚ್ಚಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಭಾರತಕ್ಕೆ ಬಹುಪಾಲು ಅಡಿಕೆ ಕಳ್ಳಸಾಗಾಣಿಕೆಯ ಮೂಲಕವೇ ಸಾಗಾಟವಾಗುತ್ತದೆ. ಹೀಗಾಗಿ ಈ ಬಾರಿ ಅಡಿಕೆ ಕಳ್ಳಸಾಗಾಣಿಕೆ ತಡೆಗೆ ಭಾರತದಲ್ಲಿ ಸೂಕ್ತ ಕ್ರಮವಾಗಬೇಕಿದೆ. ಅಸ್ಸಾಂ ಮೂಲಕ ಅಡಿಕೆ ಕಳ್ಳ ಸಾಗಾಟವಾದರೆ, ವಿವಿಧ ಬಂದರುಗಳ ಮೂಲಕ ಒಣ ಹಣ್ಣು ಎಂದು ಉಲ್ಲೇಖಿಸಿ ಅಥವಾ ತಪ್ಪಾದ ಮಾಹಿತಿ ನೀಡಿ ಅಡಿಕೆ ಸಾಗಾಟವಾಗುತ್ತಿರುವುದಕ್ಕೆ ಈಗ ನಿಯಂತ್ರಣ ಅಗತ್ಯ ಇದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…