2047ರ ವೇಳೆಗೆ ಭಾರತದ ಬಂದರುಗಳ ನಿರ್ವಹಣಾ ಸಾಮರ್ಥ್ಯವನ್ನು 10 ಸಾವಿರ ಮಿಲಿಯನ್ ಟನ್ ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಬಂದರು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.
ಅವರು ಸಾಗರ ಮಂಥನ ಶೃಂಗಸಭೆಯಲ್ಲಿ ಮಾತನಾಡಿ, ಭಾರತ ತನ್ನ ಬಂದರು, ಹಡಗು ನಿರ್ಮಾಣ ಹಾಗೂ ಒಳನಾಡು ಜಲಮಾರ್ಗಗಳ ಸಾಮರ್ಥ್ಯವನ್ನು ವೃದ್ಧಿಸಲು 80 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಮೂಲಕ ಸಾಗರ ವಲಯದಲ್ಲಿ ಕ್ರಾಂತಿಯ ಗುರಿ ಹೊಂದಿದೆ ಎಂದರು. ‘ಅಮೃತ ಕಾಲ ಸಾಗರ ದೂರದೃಷ್ಟಿ 2047’ ಕುರಿತಂತೆ ಪ್ರಸ್ತಾಪಿಸಿದ ಅವರು, ಭವಿಷ್ಯದಲ್ಲಿ ಶುದ್ಧ ಇಂಧನದ ಮೂಲಕ ಮಾತ್ರ ಹಡಗುಗಳ ಸಂಚಾರ ಕೈಗೊಳ್ಳಲು ಕ್ರಮಗಳನ್ನು ವಹಿಸಲಾಗುತ್ತಿದೆ. ನೀಲಿ ಆರ್ಥಿಕತೆಯಲ್ಲಿ ಸುಸ್ಥಿರ ಅಭಿವೃದ್ಧಿ ಕೈಗೊಳ್ಳಲು ಜಾಗತಿಕ ಸಂವಾದ ಹಾಗೂ ಜ್ಞಾನವನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಈ ಸಮಾವೇಶದಲ್ಲಿ 60ಕ್ಕೂ ಅಧಿಕ ರಾಷ್ಟ್ರಗಳು ವಿಚಾರ ವಿನಿಮಯ ನಡೆಸಲಿವೆ ಎಂದು ಅವರು ಹೇಳಿದರು.
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…