2047ರ ವೇಳೆಗೆ ಭಾರತದ ಬಂದರುಗಳ ನಿರ್ವಹಣಾ ಸಾಮರ್ಥ್ಯವನ್ನು 10 ಸಾವಿರ ಮಿಲಿಯನ್ ಟನ್ ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಬಂದರು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.
ಅವರು ಸಾಗರ ಮಂಥನ ಶೃಂಗಸಭೆಯಲ್ಲಿ ಮಾತನಾಡಿ, ಭಾರತ ತನ್ನ ಬಂದರು, ಹಡಗು ನಿರ್ಮಾಣ ಹಾಗೂ ಒಳನಾಡು ಜಲಮಾರ್ಗಗಳ ಸಾಮರ್ಥ್ಯವನ್ನು ವೃದ್ಧಿಸಲು 80 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಮೂಲಕ ಸಾಗರ ವಲಯದಲ್ಲಿ ಕ್ರಾಂತಿಯ ಗುರಿ ಹೊಂದಿದೆ ಎಂದರು. ‘ಅಮೃತ ಕಾಲ ಸಾಗರ ದೂರದೃಷ್ಟಿ 2047’ ಕುರಿತಂತೆ ಪ್ರಸ್ತಾಪಿಸಿದ ಅವರು, ಭವಿಷ್ಯದಲ್ಲಿ ಶುದ್ಧ ಇಂಧನದ ಮೂಲಕ ಮಾತ್ರ ಹಡಗುಗಳ ಸಂಚಾರ ಕೈಗೊಳ್ಳಲು ಕ್ರಮಗಳನ್ನು ವಹಿಸಲಾಗುತ್ತಿದೆ. ನೀಲಿ ಆರ್ಥಿಕತೆಯಲ್ಲಿ ಸುಸ್ಥಿರ ಅಭಿವೃದ್ಧಿ ಕೈಗೊಳ್ಳಲು ಜಾಗತಿಕ ಸಂವಾದ ಹಾಗೂ ಜ್ಞಾನವನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಈ ಸಮಾವೇಶದಲ್ಲಿ 60ಕ್ಕೂ ಅಧಿಕ ರಾಷ್ಟ್ರಗಳು ವಿಚಾರ ವಿನಿಮಯ ನಡೆಸಲಿವೆ ಎಂದು ಅವರು ಹೇಳಿದರು.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…