2047ರ ವೇಳೆಗೆ ಭಾರತದ ಬಂದರುಗಳ ನಿರ್ವಹಣಾ ಸಾಮರ್ಥ್ಯವನ್ನು 10 ಸಾವಿರ ಮಿಲಿಯನ್ ಟನ್ ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಬಂದರು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.
ಅವರು ಸಾಗರ ಮಂಥನ ಶೃಂಗಸಭೆಯಲ್ಲಿ ಮಾತನಾಡಿ, ಭಾರತ ತನ್ನ ಬಂದರು, ಹಡಗು ನಿರ್ಮಾಣ ಹಾಗೂ ಒಳನಾಡು ಜಲಮಾರ್ಗಗಳ ಸಾಮರ್ಥ್ಯವನ್ನು ವೃದ್ಧಿಸಲು 80 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಮೂಲಕ ಸಾಗರ ವಲಯದಲ್ಲಿ ಕ್ರಾಂತಿಯ ಗುರಿ ಹೊಂದಿದೆ ಎಂದರು. ‘ಅಮೃತ ಕಾಲ ಸಾಗರ ದೂರದೃಷ್ಟಿ 2047’ ಕುರಿತಂತೆ ಪ್ರಸ್ತಾಪಿಸಿದ ಅವರು, ಭವಿಷ್ಯದಲ್ಲಿ ಶುದ್ಧ ಇಂಧನದ ಮೂಲಕ ಮಾತ್ರ ಹಡಗುಗಳ ಸಂಚಾರ ಕೈಗೊಳ್ಳಲು ಕ್ರಮಗಳನ್ನು ವಹಿಸಲಾಗುತ್ತಿದೆ. ನೀಲಿ ಆರ್ಥಿಕತೆಯಲ್ಲಿ ಸುಸ್ಥಿರ ಅಭಿವೃದ್ಧಿ ಕೈಗೊಳ್ಳಲು ಜಾಗತಿಕ ಸಂವಾದ ಹಾಗೂ ಜ್ಞಾನವನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಈ ಸಮಾವೇಶದಲ್ಲಿ 60ಕ್ಕೂ ಅಧಿಕ ರಾಷ್ಟ್ರಗಳು ವಿಚಾರ ವಿನಿಮಯ ನಡೆಸಲಿವೆ ಎಂದು ಅವರು ಹೇಳಿದರು.
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…