2047ರ ವೇಳೆಗೆ ಭಾರತದ ಬಂದರುಗಳ ನಿರ್ವಹಣಾ ಸಾಮರ್ಥ್ಯವನ್ನು 10 ಸಾವಿರ ಮಿಲಿಯನ್ ಟನ್ ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಬಂದರು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.
ಅವರು ಸಾಗರ ಮಂಥನ ಶೃಂಗಸಭೆಯಲ್ಲಿ ಮಾತನಾಡಿ, ಭಾರತ ತನ್ನ ಬಂದರು, ಹಡಗು ನಿರ್ಮಾಣ ಹಾಗೂ ಒಳನಾಡು ಜಲಮಾರ್ಗಗಳ ಸಾಮರ್ಥ್ಯವನ್ನು ವೃದ್ಧಿಸಲು 80 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಮೂಲಕ ಸಾಗರ ವಲಯದಲ್ಲಿ ಕ್ರಾಂತಿಯ ಗುರಿ ಹೊಂದಿದೆ ಎಂದರು. ‘ಅಮೃತ ಕಾಲ ಸಾಗರ ದೂರದೃಷ್ಟಿ 2047’ ಕುರಿತಂತೆ ಪ್ರಸ್ತಾಪಿಸಿದ ಅವರು, ಭವಿಷ್ಯದಲ್ಲಿ ಶುದ್ಧ ಇಂಧನದ ಮೂಲಕ ಮಾತ್ರ ಹಡಗುಗಳ ಸಂಚಾರ ಕೈಗೊಳ್ಳಲು ಕ್ರಮಗಳನ್ನು ವಹಿಸಲಾಗುತ್ತಿದೆ. ನೀಲಿ ಆರ್ಥಿಕತೆಯಲ್ಲಿ ಸುಸ್ಥಿರ ಅಭಿವೃದ್ಧಿ ಕೈಗೊಳ್ಳಲು ಜಾಗತಿಕ ಸಂವಾದ ಹಾಗೂ ಜ್ಞಾನವನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಈ ಸಮಾವೇಶದಲ್ಲಿ 60ಕ್ಕೂ ಅಧಿಕ ರಾಷ್ಟ್ರಗಳು ವಿಚಾರ ವಿನಿಮಯ ನಡೆಸಲಿವೆ ಎಂದು ಅವರು ಹೇಳಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…