2047ರ ವೇಳೆಗೆ ಭಾರತದ ಬಂದರುಗಳ ನಿರ್ವಹಣಾ ಸಾಮರ್ಥ್ಯವನ್ನು 10 ಸಾವಿರ ಮಿಲಿಯನ್ ಟನ್ ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಬಂದರು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.
ಅವರು ಸಾಗರ ಮಂಥನ ಶೃಂಗಸಭೆಯಲ್ಲಿ ಮಾತನಾಡಿ, ಭಾರತ ತನ್ನ ಬಂದರು, ಹಡಗು ನಿರ್ಮಾಣ ಹಾಗೂ ಒಳನಾಡು ಜಲಮಾರ್ಗಗಳ ಸಾಮರ್ಥ್ಯವನ್ನು ವೃದ್ಧಿಸಲು 80 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಮೂಲಕ ಸಾಗರ ವಲಯದಲ್ಲಿ ಕ್ರಾಂತಿಯ ಗುರಿ ಹೊಂದಿದೆ ಎಂದರು. ‘ಅಮೃತ ಕಾಲ ಸಾಗರ ದೂರದೃಷ್ಟಿ 2047’ ಕುರಿತಂತೆ ಪ್ರಸ್ತಾಪಿಸಿದ ಅವರು, ಭವಿಷ್ಯದಲ್ಲಿ ಶುದ್ಧ ಇಂಧನದ ಮೂಲಕ ಮಾತ್ರ ಹಡಗುಗಳ ಸಂಚಾರ ಕೈಗೊಳ್ಳಲು ಕ್ರಮಗಳನ್ನು ವಹಿಸಲಾಗುತ್ತಿದೆ. ನೀಲಿ ಆರ್ಥಿಕತೆಯಲ್ಲಿ ಸುಸ್ಥಿರ ಅಭಿವೃದ್ಧಿ ಕೈಗೊಳ್ಳಲು ಜಾಗತಿಕ ಸಂವಾದ ಹಾಗೂ ಜ್ಞಾನವನ್ನು ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಈ ಸಮಾವೇಶದಲ್ಲಿ 60ಕ್ಕೂ ಅಧಿಕ ರಾಷ್ಟ್ರಗಳು ವಿಚಾರ ವಿನಿಮಯ ನಡೆಸಲಿವೆ ಎಂದು ಅವರು ಹೇಳಿದರು.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…