Advertisement
MIRROR FOCUS

ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ | ಯುಗಾದಿಗೆ ರೈತರಿಗೆ ಕೊಡುಗೆ |

Share

ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ ಚೆಲುವರಾಜು ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಮೈಮುಲ್ ಅಧ್ಯಕ್ಷ ಚೆಲುವರಾಜು, ಯುಗಾದಿ ಹಬ್ಬದ ಸಂದರ್ಭದಲ್ಲಿ ಸರ್ಕಾರ ರೈತರಿಗೆ ವಿಶೇಷ ಕೊಡುಗೆ ನೀಡಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ಒಳ್ಳೆಯ ‌ನಿರ್ಧಾರ ಕೈಗೊಂಡಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ಬೆಲೆ ಕಡಿಮೆ ಇದೆ. ಕೇರಳ, ತಮಿಳುನಾಡು, ಗುಜರಾತ್ ಭಾಗದಲ್ಲಿ ಸಾಮಾನ್ಯ ಹಾಲಿಗೆ 54 ರೂ ಇದೆ. ರಾಜ್ಯದಲ್ಲಿ ಬೆಲೆ ಏರಿಕೆ ಮಾಡಿದರೂ ಸಾಮಾನ್ಯ ಹಾಲಿಗೆ 46 ರೂ ಇದೆ. ರೈತರು ಖರೀದಿಸುವ ಹುಲ್ಲು, ಇಂಡಿ, ಬೂಸ, ರಾಸುಗಳ ಸಾಕಾಣಿಕೆ ವೆಚ್ಚ, ದುಪ್ಪಾಟಾಗಿದೆ. ಹೈನೋದ್ಯಮ ಉತ್ತೇಜನಕ್ಕೆ ಇದು ಉತ್ತಮ ನಿರ್ಧಾರ ಎಂದರು.

ನಂದಿನಿ, ರೈತರಿಗಾಗಿ ಇರುವ ಸಂಸ್ಥೆಯಾಗಿದ್ದು, ಪರಿಶುದ್ಧ ಹಾಲನ್ನು ಒದಗಿಸುತ್ತದೆ. 4 ರೂಪಾಯಿ ನೇರವಾಗಿ ರೈತರಿಗೆ ತಲುಪಿಸಲಾಗುತ್ತದೆ. ಸಂಸ್ಥೆ ಆರ್ಥಿಕ ಸಂಕಷ್ಟದಲ್ಲೇನು ಇಲ್ಲ. ಈ ವರ್ಷ ವಾರ್ಷಿಕ 6 ರಿಂದ 7 ಕೋಟಿ ಲಾಭದಲ್ಲಿ ಇದೆ ಎಂದು ಮೈಸೂರು ಹಾಲು ಒಕ್ಕೂಟದ ಅಧ್ಯಕ್ಷ ಚೆಲುವರಾಜು ಹೇಳಿದರು.

ಬೇಸಿಗೆ ಸಂದರ್ಭದಲ್ಲಿ ನಂದಿನಿ ಮಜ್ಜಿಗೆ, ಮೊಸರು,ಲಸ್ಸಿ, ಬಾದಾಮ್ ಮಿಲ್ಕ್ ಸೇರಿದಂತೆ ತಂಪು ಪಾನೀಯಗಳ ಬೇಡಿಕೆ ದುಪ್ಪಟ್ಟಾಗಿದೆ. ಬೇಡಿಕೆಗೆ ಅನುಗುಣವಾಗಿ ಉತ್ಪಾದನೆಯಾಗುತ್ತಿದೆ. ಸಾಮಾನ್ಯ ದಿನಗಳಿಗಿಂತ ಬೇಸಿಗೆ ಸಂಧರ್ಭದಲ್ಲಿ ಪ್ರತಿದಿನ 1 ಲಕ್ಷ ಲೀಟರ್ ನಷ್ಟು ಮೊಸರು,ಮಜ್ಜಿಗೆ ಮಾರಾಟವಾಗುತ್ತದೆ. ಬೇಡಿಕೆ ಎಷ್ಷೇ ಬಂದರೂ ಪೂರೈಕೆ ಮಾಡುವ ನಿಟ್ಟಿನಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮೈಮುಲ್ ಅಧ್ಯಕ್ಷ ಚೆಲುವರಾಜು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

8 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

14 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 days ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 days ago