MIRROR FOCUS

ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ | ಯುಗಾದಿಗೆ ರೈತರಿಗೆ ಕೊಡುಗೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ ಚೆಲುವರಾಜು ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಮೈಮುಲ್ ಅಧ್ಯಕ್ಷ ಚೆಲುವರಾಜು, ಯುಗಾದಿ ಹಬ್ಬದ ಸಂದರ್ಭದಲ್ಲಿ ಸರ್ಕಾರ ರೈತರಿಗೆ ವಿಶೇಷ ಕೊಡುಗೆ ನೀಡಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ಒಳ್ಳೆಯ ‌ನಿರ್ಧಾರ ಕೈಗೊಂಡಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ಬೆಲೆ ಕಡಿಮೆ ಇದೆ. ಕೇರಳ, ತಮಿಳುನಾಡು, ಗುಜರಾತ್ ಭಾಗದಲ್ಲಿ ಸಾಮಾನ್ಯ ಹಾಲಿಗೆ 54 ರೂ ಇದೆ. ರಾಜ್ಯದಲ್ಲಿ ಬೆಲೆ ಏರಿಕೆ ಮಾಡಿದರೂ ಸಾಮಾನ್ಯ ಹಾಲಿಗೆ 46 ರೂ ಇದೆ. ರೈತರು ಖರೀದಿಸುವ ಹುಲ್ಲು, ಇಂಡಿ, ಬೂಸ, ರಾಸುಗಳ ಸಾಕಾಣಿಕೆ ವೆಚ್ಚ, ದುಪ್ಪಾಟಾಗಿದೆ. ಹೈನೋದ್ಯಮ ಉತ್ತೇಜನಕ್ಕೆ ಇದು ಉತ್ತಮ ನಿರ್ಧಾರ ಎಂದರು.

Advertisement
Advertisement

ನಂದಿನಿ, ರೈತರಿಗಾಗಿ ಇರುವ ಸಂಸ್ಥೆಯಾಗಿದ್ದು, ಪರಿಶುದ್ಧ ಹಾಲನ್ನು ಒದಗಿಸುತ್ತದೆ. 4 ರೂಪಾಯಿ ನೇರವಾಗಿ ರೈತರಿಗೆ ತಲುಪಿಸಲಾಗುತ್ತದೆ. ಸಂಸ್ಥೆ ಆರ್ಥಿಕ ಸಂಕಷ್ಟದಲ್ಲೇನು ಇಲ್ಲ. ಈ ವರ್ಷ ವಾರ್ಷಿಕ 6 ರಿಂದ 7 ಕೋಟಿ ಲಾಭದಲ್ಲಿ ಇದೆ ಎಂದು ಮೈಸೂರು ಹಾಲು ಒಕ್ಕೂಟದ ಅಧ್ಯಕ್ಷ ಚೆಲುವರಾಜು ಹೇಳಿದರು.

ಬೇಸಿಗೆ ಸಂದರ್ಭದಲ್ಲಿ ನಂದಿನಿ ಮಜ್ಜಿಗೆ, ಮೊಸರು,ಲಸ್ಸಿ, ಬಾದಾಮ್ ಮಿಲ್ಕ್ ಸೇರಿದಂತೆ ತಂಪು ಪಾನೀಯಗಳ ಬೇಡಿಕೆ ದುಪ್ಪಟ್ಟಾಗಿದೆ. ಬೇಡಿಕೆಗೆ ಅನುಗುಣವಾಗಿ ಉತ್ಪಾದನೆಯಾಗುತ್ತಿದೆ. ಸಾಮಾನ್ಯ ದಿನಗಳಿಗಿಂತ ಬೇಸಿಗೆ ಸಂಧರ್ಭದಲ್ಲಿ ಪ್ರತಿದಿನ 1 ಲಕ್ಷ ಲೀಟರ್ ನಷ್ಟು ಮೊಸರು,ಮಜ್ಜಿಗೆ ಮಾರಾಟವಾಗುತ್ತದೆ. ಬೇಡಿಕೆ ಎಷ್ಷೇ ಬಂದರೂ ಪೂರೈಕೆ ಮಾಡುವ ನಿಟ್ಟಿನಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮೈಮುಲ್ ಅಧ್ಯಕ್ಷ ಚೆಲುವರಾಜು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

2 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

11 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

21 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

22 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

1 day ago