#RicePrice | ಅಕ್ಕಿ ಬೆಲೆಯಲ್ಲೂ ಏರಿಕೆ | ಬೆಲೆ ಹೆಚ್ಚಳಕ್ಕೆ ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ |

June 21, 2023
9:03 PM

ಇತ್ತೀಚೆಗೆ ನೂತನ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ “ಉಚಿತ, ಬೆಲೆ ಏರಿಕೆ” ಎರಡೇ ಶಬ್ದಗಳು ಚಾಲ್ತಿಯಲ್ಲಿದೆ. ಒಂದೆಡೆ ಸರ್ಕಾರ ಉಚಿತ ಗ್ಯಾರಂಟಿಗಳನ್ನು ನೀಡುತ್ತಿದ್ರೆ, ಇನ್ನೊಂದೆಡೆ ಬೆಲೆ ಏರಿಕೆಯ ಕಾಣುತ್ತಿದೆ.ಇದೀಗ ವಿದ್ಯುತ್ ದರ ಹೆಚ್ಚಳದ ಕಾರಣ ಅಕ್ಕಿ ಬೆಲೆ #RicePrice ಹೆಚ್ಚಿಸಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸಿದೆ.

Advertisement

ಅಕ್ಕಿ ಬೆಲೆ ಕೆಜಿಗೆ 5 ರೂ.ನಿಂದ 10 ರೂ.ವರೆಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ. ವಿದ್ಯುತ್ ಬಿಲ್ ಹೆಚ್ಚಳದಿಂದಾಗಿ ಮಿಲ್​​​ಗಳಿಗೆ ಭಾರಿ ಹೊಡೆತ ಬೀಳುತ್ತಿದೆ. ಎಪಿಎಂಸಿ ಟ್ಯಾಕ್ಸ್ ಕೂಡ ಹೊರೆಯಾಗುತ್ತಿದೆ. ಮಳೆ ಇಲ್ಲದೇ ಇರುವ ಕಾರಣ ಭತ್ತ ಸಿಗುತ್ತಿಲ್ಲ. ಹೀಗಾಗಿ ಬೆಲೆ ಏರಿಕೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ತಿಳಿಸಿದೆ.

ಪ್ರಸ್ತುತ ಒಂದು ಕೆಜಿ ಅಕ್ಕಿಗೆ‌ 45 ರೂ. ಇದೆ. ತೆರಿಗೆ, ಲೇಬರ್ ಖರ್ಚು, ವಿದ್ಯುತ್ ಬಿಲ್ ಏರಿಕೆ ಸಾಕಷ್ಡು ಹೊರೆಯಾಗುತ್ತಿದೆ. ಇದನ್ನ ಸರಿದೂಗಿಸಲು ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ರೈಸ್ ಮಿಲ್ಲರ್ಸ್ ಫೆಡರೇಷನ್ ಹೇಳಿದೆ. ಇದರೊಂದಿಗೆ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಈಗಾಗಲೇ ವಿದ್ಯುತ್ ಬಿಲ್ ಹೆಚ್ಚಳದಿಂದ ಕಂಗೆಟ್ಟಿರುವ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಮಧ್ಯೆ, ನಂದಿನ ಹಾಲಿನ ದರ ಹೆಚ್ಚಳದ ಬಗ್ಗೆಯೂ ಕೆಎಂಎಫ್ ಅಧ್ಯಕ್ಷರು ಸುಳಿವು ನೀಡಿದ್ದಾರೆ. ಒಂದು ವೇಳೆ ಅಕ್ಕಿ ದರವೂ ಹೆಚ್ಚಾದರೆ ಮಧ್ಯಮ ವರ್ಗದವರಿಗೆ ತೀವ್ರ ಹೊಡೆತ ಬೀಳಲಿದೆ. ಒಂದೆಡೆ  ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್​​​ದಾರ ಕುಟುಂಬದವರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ನಡುವೆಯೇ ಅಕ್ಕಿ ದರ ಏರಿಕೆಯ ಸುದ್ದಿ ಬಂದಿದೆ. ಒಂದು ವೇಳೆ ಅಕ್ಕಿ ಬೆಲೆ ಏರಿಕೆಯಾದರೆ ಇನ್ನೊಂದು ಚರ್ಚೆ ಆರಂಭವಾಗಲಿದೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ
ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ
February 20, 2026
7:13 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror