ಸುದ್ದಿಗಳು

#RicePrice | ಅಕ್ಕಿ ಬೆಲೆಯಲ್ಲೂ ಏರಿಕೆ | ಬೆಲೆ ಹೆಚ್ಚಳಕ್ಕೆ ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇತ್ತೀಚೆಗೆ ನೂತನ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ “ಉಚಿತ, ಬೆಲೆ ಏರಿಕೆ” ಎರಡೇ ಶಬ್ದಗಳು ಚಾಲ್ತಿಯಲ್ಲಿದೆ. ಒಂದೆಡೆ ಸರ್ಕಾರ ಉಚಿತ ಗ್ಯಾರಂಟಿಗಳನ್ನು ನೀಡುತ್ತಿದ್ರೆ, ಇನ್ನೊಂದೆಡೆ ಬೆಲೆ ಏರಿಕೆಯ ಕಾಣುತ್ತಿದೆ.ಇದೀಗ ವಿದ್ಯುತ್ ದರ ಹೆಚ್ಚಳದ ಕಾರಣ ಅಕ್ಕಿ ಬೆಲೆ #RicePrice ಹೆಚ್ಚಿಸಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸಿದೆ.

Advertisement
Advertisement

ಅಕ್ಕಿ ಬೆಲೆ ಕೆಜಿಗೆ 5 ರೂ.ನಿಂದ 10 ರೂ.ವರೆಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ. ವಿದ್ಯುತ್ ಬಿಲ್ ಹೆಚ್ಚಳದಿಂದಾಗಿ ಮಿಲ್​​​ಗಳಿಗೆ ಭಾರಿ ಹೊಡೆತ ಬೀಳುತ್ತಿದೆ. ಎಪಿಎಂಸಿ ಟ್ಯಾಕ್ಸ್ ಕೂಡ ಹೊರೆಯಾಗುತ್ತಿದೆ. ಮಳೆ ಇಲ್ಲದೇ ಇರುವ ಕಾರಣ ಭತ್ತ ಸಿಗುತ್ತಿಲ್ಲ. ಹೀಗಾಗಿ ಬೆಲೆ ಏರಿಕೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ತಿಳಿಸಿದೆ.

ಪ್ರಸ್ತುತ ಒಂದು ಕೆಜಿ ಅಕ್ಕಿಗೆ‌ 45 ರೂ. ಇದೆ. ತೆರಿಗೆ, ಲೇಬರ್ ಖರ್ಚು, ವಿದ್ಯುತ್ ಬಿಲ್ ಏರಿಕೆ ಸಾಕಷ್ಡು ಹೊರೆಯಾಗುತ್ತಿದೆ. ಇದನ್ನ ಸರಿದೂಗಿಸಲು ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ರೈಸ್ ಮಿಲ್ಲರ್ಸ್ ಫೆಡರೇಷನ್ ಹೇಳಿದೆ. ಇದರೊಂದಿಗೆ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಈಗಾಗಲೇ ವಿದ್ಯುತ್ ಬಿಲ್ ಹೆಚ್ಚಳದಿಂದ ಕಂಗೆಟ್ಟಿರುವ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಮಧ್ಯೆ, ನಂದಿನ ಹಾಲಿನ ದರ ಹೆಚ್ಚಳದ ಬಗ್ಗೆಯೂ ಕೆಎಂಎಫ್ ಅಧ್ಯಕ್ಷರು ಸುಳಿವು ನೀಡಿದ್ದಾರೆ. ಒಂದು ವೇಳೆ ಅಕ್ಕಿ ದರವೂ ಹೆಚ್ಚಾದರೆ ಮಧ್ಯಮ ವರ್ಗದವರಿಗೆ ತೀವ್ರ ಹೊಡೆತ ಬೀಳಲಿದೆ. ಒಂದೆಡೆ  ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್​​​ದಾರ ಕುಟುಂಬದವರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ನಡುವೆಯೇ ಅಕ್ಕಿ ದರ ಏರಿಕೆಯ ಸುದ್ದಿ ಬಂದಿದೆ. ಒಂದು ವೇಳೆ ಅಕ್ಕಿ ಬೆಲೆ ಏರಿಕೆಯಾದರೆ ಇನ್ನೊಂದು ಚರ್ಚೆ ಆರಂಭವಾಗಲಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

2 hours ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

5 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

17 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

1 day ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

1 day ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago