Advertisement
ಸುದ್ದಿಗಳು

#RicePrice | ಅಕ್ಕಿ ಬೆಲೆಯಲ್ಲೂ ಏರಿಕೆ | ಬೆಲೆ ಹೆಚ್ಚಳಕ್ಕೆ ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ |

Share

ಇತ್ತೀಚೆಗೆ ನೂತನ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ “ಉಚಿತ, ಬೆಲೆ ಏರಿಕೆ” ಎರಡೇ ಶಬ್ದಗಳು ಚಾಲ್ತಿಯಲ್ಲಿದೆ. ಒಂದೆಡೆ ಸರ್ಕಾರ ಉಚಿತ ಗ್ಯಾರಂಟಿಗಳನ್ನು ನೀಡುತ್ತಿದ್ರೆ, ಇನ್ನೊಂದೆಡೆ ಬೆಲೆ ಏರಿಕೆಯ ಕಾಣುತ್ತಿದೆ.ಇದೀಗ ವಿದ್ಯುತ್ ದರ ಹೆಚ್ಚಳದ ಕಾರಣ ಅಕ್ಕಿ ಬೆಲೆ #RicePrice ಹೆಚ್ಚಿಸಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸಿದೆ.

Advertisement
Advertisement
Advertisement
Advertisement

ಅಕ್ಕಿ ಬೆಲೆ ಕೆಜಿಗೆ 5 ರೂ.ನಿಂದ 10 ರೂ.ವರೆಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ. ವಿದ್ಯುತ್ ಬಿಲ್ ಹೆಚ್ಚಳದಿಂದಾಗಿ ಮಿಲ್​​​ಗಳಿಗೆ ಭಾರಿ ಹೊಡೆತ ಬೀಳುತ್ತಿದೆ. ಎಪಿಎಂಸಿ ಟ್ಯಾಕ್ಸ್ ಕೂಡ ಹೊರೆಯಾಗುತ್ತಿದೆ. ಮಳೆ ಇಲ್ಲದೇ ಇರುವ ಕಾರಣ ಭತ್ತ ಸಿಗುತ್ತಿಲ್ಲ. ಹೀಗಾಗಿ ಬೆಲೆ ಏರಿಕೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ತಿಳಿಸಿದೆ.

Advertisement
ಪ್ರಸ್ತುತ ಒಂದು ಕೆಜಿ ಅಕ್ಕಿಗೆ‌ 45 ರೂ. ಇದೆ. ತೆರಿಗೆ, ಲೇಬರ್ ಖರ್ಚು, ವಿದ್ಯುತ್ ಬಿಲ್ ಏರಿಕೆ ಸಾಕಷ್ಡು ಹೊರೆಯಾಗುತ್ತಿದೆ. ಇದನ್ನ ಸರಿದೂಗಿಸಲು ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ರೈಸ್ ಮಿಲ್ಲರ್ಸ್ ಫೆಡರೇಷನ್ ಹೇಳಿದೆ. ಇದರೊಂದಿಗೆ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಈಗಾಗಲೇ ವಿದ್ಯುತ್ ಬಿಲ್ ಹೆಚ್ಚಳದಿಂದ ಕಂಗೆಟ್ಟಿರುವ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಮಧ್ಯೆ, ನಂದಿನ ಹಾಲಿನ ದರ ಹೆಚ್ಚಳದ ಬಗ್ಗೆಯೂ ಕೆಎಂಎಫ್ ಅಧ್ಯಕ್ಷರು ಸುಳಿವು ನೀಡಿದ್ದಾರೆ. ಒಂದು ವೇಳೆ ಅಕ್ಕಿ ದರವೂ ಹೆಚ್ಚಾದರೆ ಮಧ್ಯಮ ವರ್ಗದವರಿಗೆ ತೀವ್ರ ಹೊಡೆತ ಬೀಳಲಿದೆ. ಒಂದೆಡೆ  ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್​​​ದಾರ ಕುಟುಂಬದವರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ನಡುವೆಯೇ ಅಕ್ಕಿ ದರ ಏರಿಕೆಯ ಸುದ್ದಿ ಬಂದಿದೆ. ಒಂದು ವೇಳೆ ಅಕ್ಕಿ ಬೆಲೆ ಏರಿಕೆಯಾದರೆ ಇನ್ನೊಂದು ಚರ್ಚೆ ಆರಂಭವಾಗಲಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವಕ್ಯಾನ್ಸರ್‌ ದಿನ | ಮತ್ತೆ “ಅಡಿಕೆ ಕ್ಯಾನ್ಸರ್‌” ಎಂದ ವಿಶ್ವ ಆರೋಗ್ಯ ಸಂಸ್ಥೆ |

ಅಡಿಕೆಯಂತಹ ಕ್ಯಾನ್ಸರ್ ಉಂಟುಮಾಡುವ ಏಜೆಂಟ್‌ಗಳ ನಿಯಂತ್ರಣಕ್ಕೆ ನೀತಿಗಳು ಮತ್ತು ಮಾರ್ಗದರ್ಶನದ ಕೊರತೆಯಿದೆ ಎಂದು…

2 hours ago

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

3 days ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

3 days ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

4 days ago