ಇತ್ತೀಚೆಗೆ ನೂತನ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ “ಉಚಿತ, ಬೆಲೆ ಏರಿಕೆ” ಎರಡೇ ಶಬ್ದಗಳು ಚಾಲ್ತಿಯಲ್ಲಿದೆ. ಒಂದೆಡೆ ಸರ್ಕಾರ ಉಚಿತ ಗ್ಯಾರಂಟಿಗಳನ್ನು ನೀಡುತ್ತಿದ್ರೆ, ಇನ್ನೊಂದೆಡೆ ಬೆಲೆ ಏರಿಕೆಯ ಕಾಣುತ್ತಿದೆ.ಇದೀಗ ವಿದ್ಯುತ್ ದರ ಹೆಚ್ಚಳದ ಕಾರಣ ಅಕ್ಕಿ ಬೆಲೆ #RicePrice ಹೆಚ್ಚಿಸಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸಿದೆ.
ಅಕ್ಕಿ ಬೆಲೆ ಕೆಜಿಗೆ 5 ರೂ.ನಿಂದ 10 ರೂ.ವರೆಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ. ವಿದ್ಯುತ್ ಬಿಲ್ ಹೆಚ್ಚಳದಿಂದಾಗಿ ಮಿಲ್ಗಳಿಗೆ ಭಾರಿ ಹೊಡೆತ ಬೀಳುತ್ತಿದೆ. ಎಪಿಎಂಸಿ ಟ್ಯಾಕ್ಸ್ ಕೂಡ ಹೊರೆಯಾಗುತ್ತಿದೆ. ಮಳೆ ಇಲ್ಲದೇ ಇರುವ ಕಾರಣ ಭತ್ತ ಸಿಗುತ್ತಿಲ್ಲ. ಹೀಗಾಗಿ ಬೆಲೆ ಏರಿಕೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ತಿಳಿಸಿದೆ.
ಈಗಾಗಲೇ ವಿದ್ಯುತ್ ಬಿಲ್ ಹೆಚ್ಚಳದಿಂದ ಕಂಗೆಟ್ಟಿರುವ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಮಧ್ಯೆ, ನಂದಿನ ಹಾಲಿನ ದರ ಹೆಚ್ಚಳದ ಬಗ್ಗೆಯೂ ಕೆಎಂಎಫ್ ಅಧ್ಯಕ್ಷರು ಸುಳಿವು ನೀಡಿದ್ದಾರೆ. ಒಂದು ವೇಳೆ ಅಕ್ಕಿ ದರವೂ ಹೆಚ್ಚಾದರೆ ಮಧ್ಯಮ ವರ್ಗದವರಿಗೆ ತೀವ್ರ ಹೊಡೆತ ಬೀಳಲಿದೆ. ಒಂದೆಡೆ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ದಾರ ಕುಟುಂಬದವರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ನಡುವೆಯೇ ಅಕ್ಕಿ ದರ ಏರಿಕೆಯ ಸುದ್ದಿ ಬಂದಿದೆ. ಒಂದು ವೇಳೆ ಅಕ್ಕಿ ಬೆಲೆ ಏರಿಕೆಯಾದರೆ ಇನ್ನೊಂದು ಚರ್ಚೆ ಆರಂಭವಾಗಲಿದೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…