ಇತ್ತೀಚೆಗೆ ನೂತನ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ “ಉಚಿತ, ಬೆಲೆ ಏರಿಕೆ” ಎರಡೇ ಶಬ್ದಗಳು ಚಾಲ್ತಿಯಲ್ಲಿದೆ. ಒಂದೆಡೆ ಸರ್ಕಾರ ಉಚಿತ ಗ್ಯಾರಂಟಿಗಳನ್ನು ನೀಡುತ್ತಿದ್ರೆ, ಇನ್ನೊಂದೆಡೆ ಬೆಲೆ ಏರಿಕೆಯ ಕಾಣುತ್ತಿದೆ.ಇದೀಗ ವಿದ್ಯುತ್ ದರ ಹೆಚ್ಚಳದ ಕಾರಣ ಅಕ್ಕಿ ಬೆಲೆ #RicePrice ಹೆಚ್ಚಿಸಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸಿದೆ.
ಅಕ್ಕಿ ಬೆಲೆ ಕೆಜಿಗೆ 5 ರೂ.ನಿಂದ 10 ರೂ.ವರೆಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ. ವಿದ್ಯುತ್ ಬಿಲ್ ಹೆಚ್ಚಳದಿಂದಾಗಿ ಮಿಲ್ಗಳಿಗೆ ಭಾರಿ ಹೊಡೆತ ಬೀಳುತ್ತಿದೆ. ಎಪಿಎಂಸಿ ಟ್ಯಾಕ್ಸ್ ಕೂಡ ಹೊರೆಯಾಗುತ್ತಿದೆ. ಮಳೆ ಇಲ್ಲದೇ ಇರುವ ಕಾರಣ ಭತ್ತ ಸಿಗುತ್ತಿಲ್ಲ. ಹೀಗಾಗಿ ಬೆಲೆ ಏರಿಕೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ತಿಳಿಸಿದೆ.
ಈಗಾಗಲೇ ವಿದ್ಯುತ್ ಬಿಲ್ ಹೆಚ್ಚಳದಿಂದ ಕಂಗೆಟ್ಟಿರುವ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಮಧ್ಯೆ, ನಂದಿನ ಹಾಲಿನ ದರ ಹೆಚ್ಚಳದ ಬಗ್ಗೆಯೂ ಕೆಎಂಎಫ್ ಅಧ್ಯಕ್ಷರು ಸುಳಿವು ನೀಡಿದ್ದಾರೆ. ಒಂದು ವೇಳೆ ಅಕ್ಕಿ ದರವೂ ಹೆಚ್ಚಾದರೆ ಮಧ್ಯಮ ವರ್ಗದವರಿಗೆ ತೀವ್ರ ಹೊಡೆತ ಬೀಳಲಿದೆ. ಒಂದೆಡೆ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ದಾರ ಕುಟುಂಬದವರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ನಡುವೆಯೇ ಅಕ್ಕಿ ದರ ಏರಿಕೆಯ ಸುದ್ದಿ ಬಂದಿದೆ. ಒಂದು ವೇಳೆ ಅಕ್ಕಿ ಬೆಲೆ ಏರಿಕೆಯಾದರೆ ಇನ್ನೊಂದು ಚರ್ಚೆ ಆರಂಭವಾಗಲಿದೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…