ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶಾದ್ಯಂತ 1 ಸಾವಿರದ 600 ಚಾಲಕ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಅವರು, ದೇಶದ ಆರ್ಥಿಕ ಪ್ರಗತಿ ವೃದ್ಧಿಯಾಗುತ್ತಿದ್ದಂತೆ, ರಸ್ತೆ ಸರಕು ಸಾಗಾಣೆಯಲ್ಲೂ ತೀವ್ರ ಏರಿಕೆಯಾಗುತ್ತಿದೆ. ಚಾಲಕರು 16 ತಾಸು ದುಡಿಯುವಂತಾಗಿದೆ. ರಸ್ತೆ ಸುರಕ್ಷತೆಯಲ್ಲಿ ಚಾಲಕರ ತರಬೇತಿಯು ಪ್ರಮುಖವಾಗಿದ್ದು , ದೇಶದಲ್ಲಿ 22 ಲಕ್ಷ ಅನುಭವಿ ಚಾಲಕರ ಕೊರತೆಯಿದೆ ಈ ಕೊರತೆಯನ್ನು ನಿವಾರಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ಜಾರಿಗೆ ತರಲಾಗಿದ್ದು, ಇದರಡಿ ಹೊಸ ಚಾಲಕರ ತರಬೇತಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಪ್ರತಿ ಕೇಂದ್ರಕ್ಕೆ 2 ಕೋಟಿ 50 ಲಕ್ಷ ರೂಪಾಯಿ ಸರ್ಕಾರ ನೀಡಲಿದೆ ಎಂದರು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…