Advertisement
MIRROR FOCUS

ಅಂತರಾಷ್ಟ್ರೀಯ ರಬ್ಬರ್‌ ಬೆಲೆ ಹೆಚ್ಚಳ | ಹೆಚ್ಚುತ್ತಿರುವ ರಬ್ಬರ್‌ ಬೇಡಿಕೆ |

Share

ಅಂತರಾಷ್ಟ್ರೀಯ ರಬ್ಬರ್‌ ಬೆಲೆಯಲ್ಲಿ ಹೆಚ್ಚಳ ಕಂಡುಬಂದಿದೆ. ಸ್ಥಳೀಯ ಧಾರಣೆಗಿಂತಲೂ ಸುಮಾರು 20 ರೂಪಾಯಿ ಹೆಚ್ಚಳ ಇದೆ. ಸದ್ಯ ರಬ್ಬರ್‌ ಬೇಡಿಕೆ ಮುಂದುವರಿದಿದ್ದು, ರಬ್ಬರ್‌ ಬೆಳೆಗಾರರಿಗೆ ಆಶಾದಾಯಕ ವಾತಾವರಣ ಸದ್ಯದ ಮಟ್ಟಿಗೆ ಕಂಡುಬಂದಿದೆ.

Advertisement
Advertisement

ಅಂತರಾಷ್ಟ್ರೀಯ ರಬ್ಬರ್ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ತನ್ನ ದಾಖಲೆಯನ್ನು ಮುಂದುವರೆಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 211 ರೂಪಾಯಿ ಇದ್ದರೆ ಕೊಟ್ಟಾಯಂನಲ್ಲಿ ಆರ್‌ಎಸ್‌ಎಸ್ 4 ಗ್ರೇಡ್‌ ರಬ್ಬರ್‌ಗೆ  ಕೆಜಿಗೆ 184 ರೂಪಾಯಿ ಇತ್ತು. ಅಂತರಾಷ್ಟ್ರೀಯ ರಬ್ಬರ್‌ ಧಾರಣೆಯು  ಜನವರಿ  ಮಧ್ಯದಿಂದ ಭಾರತೀಯ ಬೆಲೆಯನ್ನು ಮೀರಿಸಿದೆ. ಬೆಲೆ ವ್ಯತ್ಯಾಸವಿದ್ದರೂ, ವಿಯೆಟ್ನಾಂನಂತಹ ವಿವಿಧ‌ ರಬ್ಬರ್ ಉತ್ಪಾದಕ  ರಾಷ್ಟ್ರಗಳಿಗೆ ಕೂಡಾ ಆಮದು-ರಫ್ತು ಲಾಭವನ್ನು ಪಡೆಯಲು ಸಾಧ್ಯವಾಗಲಿಲ್ಲ. ಜಾಗತಿಕವಾಗಿ, ಶೀಟ್ ರಬ್ಬರ್ ಬಳಕೆಯು ಸುಮಾರು 10% ರಷ್ಟು ಹೆಚ್ಚಾಗಿದೆ. ಚೀನಾ, ಮಲೇಷ್ಯಾ ಮತ್ತು ಶ್ರೀಲಂಕಾ ರಬ್ಬರ್‌ ಬಳಕೆಯಲ್ಲಿ ಮುಂಚೂಣಿಯಲ್ಲಿದೆ, ವಿವಿಧ ಕಂಪನಿಗಳು ರಬ್ಬರ್‌ ಬೇಡಿಕೆ ವ್ಯಕ್ತಪಡಿಸಿವೆ.

ಸದ್ಯ ಭಾರತದಲ್ಲೂ ಕೈಗಾರಿಕೆಗಳಿಗೆ ಅನುಕೂಲಕರ ದರದಲ್ಲಿ ರಬ್ಬರ್‌ ಬೇಕಾಗಿದೆ. ಅಂತರಾಷ್ಟ್ರೀಯ ರಬ್ಬರ್‌ ಬೆಲೆ ಏರಿಕೆಯಾದಂತೆಯೇ ದೇಶೀಯ ವಲಯದಲ್ಲಿ ರಬ್ಬರ್‌ ಧಾರಣೆ ಆಶಾದಾಯಕವಾಗಿ ಏರಿಕೆ ಸಾಧ್ಯತೆ ಇದೆ. ಹೀಗಾಗಿ ಧಾರಣೆ ಏರಿಕೆ ಇನ್ನಷ್ಟು ಸಾಧ್ಯತೆ ಇದೆ.

ಸದ್ಯ ಬೇಸಗೆಯ ಕಾರಣದಿಂದ ರಬ್ಬರ್‌ ಟ್ಯಾಪಿಂಗ್‌ ಭಾರತದ ಹಲವು ಕಡೆ ಸ್ಥಗಿತಗೊಂಡಿದೆ. ಮಳೆಗಾಲ ಆರಂಭದಿಂದ ರಬ್ಬರ್‌ ಟ್ಯಾಪಿಂಗ್‌ ಮತ್ತೆ ಆರಂಭಗೊಳ್ಳಲಿದೆ. ಅದುವರೆಗೂ ರಬ್ಬರ್‌ ಧಾರಣೆಯಲ್ಲಿ ಏರಿಕೆ ಕಾಣಲಿದೆ. ಆ ಬಳಿಕದ ವಾತಾವರಣವೂ ಈಗಿನ ಲೆಕ್ಕಾಚಾರದಲ್ಲಿ ಆಶಾದಾಯಕ ವಾತಾವರಣ ಇದೆ.

Source : NRR News

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

11 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

12 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

12 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

12 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

20 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

21 hours ago