Advertisement
MIRROR FOCUS

ಅಂತರಾಷ್ಟ್ರೀಯ ರಬ್ಬರ್‌ ಬೆಲೆ ಹೆಚ್ಚಳ | ಹೆಚ್ಚುತ್ತಿರುವ ರಬ್ಬರ್‌ ಬೇಡಿಕೆ |

Share

ಅಂತರಾಷ್ಟ್ರೀಯ ರಬ್ಬರ್‌ ಬೆಲೆಯಲ್ಲಿ ಹೆಚ್ಚಳ ಕಂಡುಬಂದಿದೆ. ಸ್ಥಳೀಯ ಧಾರಣೆಗಿಂತಲೂ ಸುಮಾರು 20 ರೂಪಾಯಿ ಹೆಚ್ಚಳ ಇದೆ. ಸದ್ಯ ರಬ್ಬರ್‌ ಬೇಡಿಕೆ ಮುಂದುವರಿದಿದ್ದು, ರಬ್ಬರ್‌ ಬೆಳೆಗಾರರಿಗೆ ಆಶಾದಾಯಕ ವಾತಾವರಣ ಸದ್ಯದ ಮಟ್ಟಿಗೆ ಕಂಡುಬಂದಿದೆ.

ಅಂತರಾಷ್ಟ್ರೀಯ ರಬ್ಬರ್ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ತನ್ನ ದಾಖಲೆಯನ್ನು ಮುಂದುವರೆಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 211 ರೂಪಾಯಿ ಇದ್ದರೆ ಕೊಟ್ಟಾಯಂನಲ್ಲಿ ಆರ್‌ಎಸ್‌ಎಸ್ 4 ಗ್ರೇಡ್‌ ರಬ್ಬರ್‌ಗೆ  ಕೆಜಿಗೆ 184 ರೂಪಾಯಿ ಇತ್ತು. ಅಂತರಾಷ್ಟ್ರೀಯ ರಬ್ಬರ್‌ ಧಾರಣೆಯು  ಜನವರಿ  ಮಧ್ಯದಿಂದ ಭಾರತೀಯ ಬೆಲೆಯನ್ನು ಮೀರಿಸಿದೆ. ಬೆಲೆ ವ್ಯತ್ಯಾಸವಿದ್ದರೂ, ವಿಯೆಟ್ನಾಂನಂತಹ ವಿವಿಧ‌ ರಬ್ಬರ್ ಉತ್ಪಾದಕ  ರಾಷ್ಟ್ರಗಳಿಗೆ ಕೂಡಾ ಆಮದು-ರಫ್ತು ಲಾಭವನ್ನು ಪಡೆಯಲು ಸಾಧ್ಯವಾಗಲಿಲ್ಲ. ಜಾಗತಿಕವಾಗಿ, ಶೀಟ್ ರಬ್ಬರ್ ಬಳಕೆಯು ಸುಮಾರು 10% ರಷ್ಟು ಹೆಚ್ಚಾಗಿದೆ. ಚೀನಾ, ಮಲೇಷ್ಯಾ ಮತ್ತು ಶ್ರೀಲಂಕಾ ರಬ್ಬರ್‌ ಬಳಕೆಯಲ್ಲಿ ಮುಂಚೂಣಿಯಲ್ಲಿದೆ, ವಿವಿಧ ಕಂಪನಿಗಳು ರಬ್ಬರ್‌ ಬೇಡಿಕೆ ವ್ಯಕ್ತಪಡಿಸಿವೆ.

ಸದ್ಯ ಭಾರತದಲ್ಲೂ ಕೈಗಾರಿಕೆಗಳಿಗೆ ಅನುಕೂಲಕರ ದರದಲ್ಲಿ ರಬ್ಬರ್‌ ಬೇಕಾಗಿದೆ. ಅಂತರಾಷ್ಟ್ರೀಯ ರಬ್ಬರ್‌ ಬೆಲೆ ಏರಿಕೆಯಾದಂತೆಯೇ ದೇಶೀಯ ವಲಯದಲ್ಲಿ ರಬ್ಬರ್‌ ಧಾರಣೆ ಆಶಾದಾಯಕವಾಗಿ ಏರಿಕೆ ಸಾಧ್ಯತೆ ಇದೆ. ಹೀಗಾಗಿ ಧಾರಣೆ ಏರಿಕೆ ಇನ್ನಷ್ಟು ಸಾಧ್ಯತೆ ಇದೆ.

ಸದ್ಯ ಬೇಸಗೆಯ ಕಾರಣದಿಂದ ರಬ್ಬರ್‌ ಟ್ಯಾಪಿಂಗ್‌ ಭಾರತದ ಹಲವು ಕಡೆ ಸ್ಥಗಿತಗೊಂಡಿದೆ. ಮಳೆಗಾಲ ಆರಂಭದಿಂದ ರಬ್ಬರ್‌ ಟ್ಯಾಪಿಂಗ್‌ ಮತ್ತೆ ಆರಂಭಗೊಳ್ಳಲಿದೆ. ಅದುವರೆಗೂ ರಬ್ಬರ್‌ ಧಾರಣೆಯಲ್ಲಿ ಏರಿಕೆ ಕಾಣಲಿದೆ. ಆ ಬಳಿಕದ ವಾತಾವರಣವೂ ಈಗಿನ ಲೆಕ್ಕಾಚಾರದಲ್ಲಿ ಆಶಾದಾಯಕ ವಾತಾವರಣ ಇದೆ.

Source : NRR News

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

3 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

4 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

4 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

12 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

16 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

16 hours ago