ಸುದ್ದಿಗಳು

ಶೂನ್ಯ ಬಡ್ಡಿಯಲ್ಲಿ 5 ಲಕ್ಷದವರೆಗೆ ರೈತರಿಗೆ ಸಿಗುವ ಸಾಲದ ಪ್ರಮಾಣ ಹೆಚ್ಚಳ – ಕೃಷಿ ಬೆಳೆಗೆ ತಕ್ಕಂತೆ ಸಾಲದ ಪ್ರಮಾಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೃಷಿ ಬೆಳೆಗೆ ತಕ್ಕಂತೆ  ಸಾಲ ಪ್ರಮಾಣವನ್ನು ನೀಡಲು ಶೂನ್ಯ ಬಡ್ಡಿಯಲ್ಲಿ 5 ಲಕ್ಷದವರೆಗೆ  ರೈತರಿಗೆ ಸಿಗುವ ಸಾಲದ ಪ್ರಮಾಣ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರೈತ ಉಳಿದರೆ ಮಾತ್ರ ಕೃಷಿ ಉಳಿಯುತ್ತದೆ. ರೈತ ಕೇಂದ್ರಿತ ಕಾರ್ಯಕ್ರಮಗಳನ್ನು ರೂಪಿಸಿದಾಗ ಹಾಗೂ ರೈತರಿಗೆ ಶಕ್ತಿ ತುಂಬುವ ಕಾಲ ಬಂದಿದೆ

Advertisement
Advertisement

ಕಿಸಾನ್ ಸಮ್ಮಾನ್ , ರೈತ ವಿದ್ಯಾ ನಿಧಿ  ಕಾರ್ಯಕ್ರಮಗಳು ರೈತನನ್ನು ಶಕ್ತಿಶಾಲಿಯಾಗಿ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ  ಮೂಲಭೂತ ಬದಲಾವಣೆಗಳನ್ನು ತರಲಾಗಿದೆಕೃಷಿ ಬೆಳೆಗೆ ತಕ್ಕಂತೆ  ಸಾಲ ಪ್ರಮಾಣವನ್ನು ನೀಡಲು ಶೂನ್ಯ ಬಡ್ಡಿಯಲ್ಲಿ 5 ಲಕ್ಷದವರೆಗೆ  ರೈತರಿಗೆ ಸಿಗುವ ಸಾಲದ ಪ್ರಮಾಣ ಹೆಚ್ಚಳ ಮಾಡಲಾಗಿದೆ ಎಂದರು.

ರೈತ ವಿದ್ಯಾನಿಧಿ ರೂಪಿಸುವ ಮೂಲಕ ರೈತರ ಮಕ್ಕಳು ಉನ್ನತ ವ್ಯಾಸಂಗ ಮಾಡಿ ಬೇರೆ ವೃತ್ತಿ ಮಾಡುವ ಮೂಲಕ ಆದಾಯ ಹೆಚ್ಚಳ ಪಡೆಯುವಂತಾಗಬೇಕು. ಗ್ರಾಮೀಣ ಭಾಗದ ಮಕ್ಕಳು ಹೆಚ್ಚು ಬುದ್ದಿವಂತರಿರುತ್ತಾರೆ. ಅವರನ್ನು ಕಡೆಗಣಿಸಬಾರದು. 180 ಕೋಟಿ ರೂ.ಗಳ ವೆಚ್ಚದಲ್ಲಿ ರೈತರಿಗೆ ವಿಮಾ ಯೋಜನೆ ಜಾರಿಯಾಗಿದೆ. ರೈತನ  ಸಹಜ  ಸಾವಾದರೂ ಅವನ ಕುಟುಂಬಕ್ಕೆ 2 ಲಕ್ಷ ರೂ. ವಿಮಾ ಹಣ ಬರುವಂತೆಮಾಡಲಾಗಿದೆ ಎಂದರು.

ರೈತನ ಬದುಕು ಉತ್ತಮವಾಗಲು ಗ್ರಾಮೀಣ ಆರ್ಥಿಕ ಸ್ಥಿತಿ ಬದಲಾಗಬೇಕು. ಕೃಷಿಯಲ್ಲಿ ಅತಿ ಹೆಚ್ಚು ಬಂಡವಾಳ ಹೂಡಿಕೆಯಾಗಬೇಕು. ಇದರಲ್ಲಿ ಬ್ಯಾಂಕ್ ಗಳ ಪಾತ್ರ ಬಹಳ ದೊಡ್ಡದಿದೆ. ಬಗ್ಗೆ  ಎಲ್ಲಾ ಬ್ಯಾಂಕರ್ ಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರೈತರ ಆದಾಯ ಹೆಚ್ಚಳ ಮಾಡಲು 300 ಕೋಟಿ ರೂ.ಗಳ ವಿಶೇಷ ಆವರ್ತ ನಿಧಿ ಮೀಸಲಿಡಲಾಗಿದೆ.

Advertisement

ಯಾವುದೇ ಬೆಳೆ ಬೆಲೆ ಕುಸಿದರೆ ತಕ್ಷಣ ಸ್ಪಂದಿಸಿ ಬೆಂಬಲ ಬೆಲೆಅಡಿ ಭತ್ತ, ರಾಗಿ, ತೊಗರಿ ಅಡಕೆ ಬೆಳೆಗಳಿಗೆ ಬೆಂಬಲ ಬೆಲೆ ನೀಡಲಾಗಿದೆ. ರೈತರಿಗೆ ಯಶಸ್ವಿನಿ ಯೋಜನೆಯನ್ನು ಪುನ: ಪ್ರಾರಂಭಿಸಲಾಗಿದೆ. 3600 ಕೋಟಿ ಆವರ್ತ ನಿಧಿ ಇಡಲಾಗಿದೆ. ರಾಗಿ ಮತ್ತು ಜೋಳ ರಾಜ್ಯದ ಆಹಾರವಾಗಿದ್ದು, ಇದನ್ನು ಮೊದಲ ಬಾರಿಗೆ ಪಡಿತರದಲ್ಲಿ ವಿತರಿಸಲಾಗುತ್ತಿದೆ ಎಂದರು.

ಮೀನುಗಾರರು, ಗುಡ್ಡಗಾಡು ಜನ ಕಠಿಣ ಪರಿಶ್ರಮದಿಂದ ಕಾರ್ಯನಿರ್ವಹಿಸುತ್ತಾರೆ. ಆದರೆ ಅಲ್ಲಿ ಆತಂಕವಿರುತ್ತದೆ. ರೈತ ಅಂದರೆ ಭರವಸೆ, ಅವನು ಮಣ್ಣಿನ ಜೊತೆ ಬದುಕುತ್ತಾನೆ.‌ ರೈತರು ಕಠಿಣ ಪರಿಶ್ರಮಿಗಳೂ ಹೌದು, ಪ್ರಾಮಾಣಿಕರೂ ಹೌದುಭರವಸೆ  ರೈತನ ಕಾಯಕ ಗುಣ ಧರ್ಮ, ಅದರಿಂದ ನಮಗೆ ನಿರಂತರ ಆಹಾರ ದೊರೆಯುತ್ತಿದೆ.

ನಮಗೆ ಸ್ವಾತಂತ್ರ್ಯ ಬಂದಾಗ ಹೊರ ದೇಶದಿಂದ ಆಹಾರ ಪದಾರ್ಥ ತರಲಾಗುತ್ತಿತ್ತು. ಈಗ 130 ಕೋಟಿ ಜನರಿಗೆ ಆಹಾರ ಉತ್ಪಾದನೆ ಮಾಡಲಾಗುತ್ತಿದೆ. ಕೃಷಿ ಬೆಳೆದಂತೆ ರೈತ ಬೆಳೆದಿಲ್ಲ. ರೈತ ಉತ್ಪಾದನೆ ಮಾಡುತ್ತಾನೆ. ಆದರೆ ಲಾಭ ಸಿಗುತ್ತಿಲ್ಲ  ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

18 minutes ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?

ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…

2 hours ago

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

10 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

12 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

17 hours ago