Advertisement
ಸುದ್ದಿಗಳು

ಶೂನ್ಯ ಬಡ್ಡಿಯಲ್ಲಿ 5 ಲಕ್ಷದವರೆಗೆ ರೈತರಿಗೆ ಸಿಗುವ ಸಾಲದ ಪ್ರಮಾಣ ಹೆಚ್ಚಳ – ಕೃಷಿ ಬೆಳೆಗೆ ತಕ್ಕಂತೆ ಸಾಲದ ಪ್ರಮಾಣ

Share

ಕೃಷಿ ಬೆಳೆಗೆ ತಕ್ಕಂತೆ  ಸಾಲ ಪ್ರಮಾಣವನ್ನು ನೀಡಲು ಶೂನ್ಯ ಬಡ್ಡಿಯಲ್ಲಿ 5 ಲಕ್ಷದವರೆಗೆ  ರೈತರಿಗೆ ಸಿಗುವ ಸಾಲದ ಪ್ರಮಾಣ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರೈತ ಉಳಿದರೆ ಮಾತ್ರ ಕೃಷಿ ಉಳಿಯುತ್ತದೆ. ರೈತ ಕೇಂದ್ರಿತ ಕಾರ್ಯಕ್ರಮಗಳನ್ನು ರೂಪಿಸಿದಾಗ ಹಾಗೂ ರೈತರಿಗೆ ಶಕ್ತಿ ತುಂಬುವ ಕಾಲ ಬಂದಿದೆ

ಕಿಸಾನ್ ಸಮ್ಮಾನ್ , ರೈತ ವಿದ್ಯಾ ನಿಧಿ  ಕಾರ್ಯಕ್ರಮಗಳು ರೈತನನ್ನು ಶಕ್ತಿಶಾಲಿಯಾಗಿ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ  ಮೂಲಭೂತ ಬದಲಾವಣೆಗಳನ್ನು ತರಲಾಗಿದೆಕೃಷಿ ಬೆಳೆಗೆ ತಕ್ಕಂತೆ  ಸಾಲ ಪ್ರಮಾಣವನ್ನು ನೀಡಲು ಶೂನ್ಯ ಬಡ್ಡಿಯಲ್ಲಿ 5 ಲಕ್ಷದವರೆಗೆ  ರೈತರಿಗೆ ಸಿಗುವ ಸಾಲದ ಪ್ರಮಾಣ ಹೆಚ್ಚಳ ಮಾಡಲಾಗಿದೆ ಎಂದರು.

ರೈತ ವಿದ್ಯಾನಿಧಿ ರೂಪಿಸುವ ಮೂಲಕ ರೈತರ ಮಕ್ಕಳು ಉನ್ನತ ವ್ಯಾಸಂಗ ಮಾಡಿ ಬೇರೆ ವೃತ್ತಿ ಮಾಡುವ ಮೂಲಕ ಆದಾಯ ಹೆಚ್ಚಳ ಪಡೆಯುವಂತಾಗಬೇಕು. ಗ್ರಾಮೀಣ ಭಾಗದ ಮಕ್ಕಳು ಹೆಚ್ಚು ಬುದ್ದಿವಂತರಿರುತ್ತಾರೆ. ಅವರನ್ನು ಕಡೆಗಣಿಸಬಾರದು. 180 ಕೋಟಿ ರೂ.ಗಳ ವೆಚ್ಚದಲ್ಲಿ ರೈತರಿಗೆ ವಿಮಾ ಯೋಜನೆ ಜಾರಿಯಾಗಿದೆ. ರೈತನ  ಸಹಜ  ಸಾವಾದರೂ ಅವನ ಕುಟುಂಬಕ್ಕೆ 2 ಲಕ್ಷ ರೂ. ವಿಮಾ ಹಣ ಬರುವಂತೆಮಾಡಲಾಗಿದೆ ಎಂದರು.

ರೈತನ ಬದುಕು ಉತ್ತಮವಾಗಲು ಗ್ರಾಮೀಣ ಆರ್ಥಿಕ ಸ್ಥಿತಿ ಬದಲಾಗಬೇಕು. ಕೃಷಿಯಲ್ಲಿ ಅತಿ ಹೆಚ್ಚು ಬಂಡವಾಳ ಹೂಡಿಕೆಯಾಗಬೇಕು. ಇದರಲ್ಲಿ ಬ್ಯಾಂಕ್ ಗಳ ಪಾತ್ರ ಬಹಳ ದೊಡ್ಡದಿದೆ. ಬಗ್ಗೆ  ಎಲ್ಲಾ ಬ್ಯಾಂಕರ್ ಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರೈತರ ಆದಾಯ ಹೆಚ್ಚಳ ಮಾಡಲು 300 ಕೋಟಿ ರೂ.ಗಳ ವಿಶೇಷ ಆವರ್ತ ನಿಧಿ ಮೀಸಲಿಡಲಾಗಿದೆ.

ಯಾವುದೇ ಬೆಳೆ ಬೆಲೆ ಕುಸಿದರೆ ತಕ್ಷಣ ಸ್ಪಂದಿಸಿ ಬೆಂಬಲ ಬೆಲೆಅಡಿ ಭತ್ತ, ರಾಗಿ, ತೊಗರಿ ಅಡಕೆ ಬೆಳೆಗಳಿಗೆ ಬೆಂಬಲ ಬೆಲೆ ನೀಡಲಾಗಿದೆ. ರೈತರಿಗೆ ಯಶಸ್ವಿನಿ ಯೋಜನೆಯನ್ನು ಪುನ: ಪ್ರಾರಂಭಿಸಲಾಗಿದೆ. 3600 ಕೋಟಿ ಆವರ್ತ ನಿಧಿ ಇಡಲಾಗಿದೆ. ರಾಗಿ ಮತ್ತು ಜೋಳ ರಾಜ್ಯದ ಆಹಾರವಾಗಿದ್ದು, ಇದನ್ನು ಮೊದಲ ಬಾರಿಗೆ ಪಡಿತರದಲ್ಲಿ ವಿತರಿಸಲಾಗುತ್ತಿದೆ ಎಂದರು.

ಮೀನುಗಾರರು, ಗುಡ್ಡಗಾಡು ಜನ ಕಠಿಣ ಪರಿಶ್ರಮದಿಂದ ಕಾರ್ಯನಿರ್ವಹಿಸುತ್ತಾರೆ. ಆದರೆ ಅಲ್ಲಿ ಆತಂಕವಿರುತ್ತದೆ. ರೈತ ಅಂದರೆ ಭರವಸೆ, ಅವನು ಮಣ್ಣಿನ ಜೊತೆ ಬದುಕುತ್ತಾನೆ.‌ ರೈತರು ಕಠಿಣ ಪರಿಶ್ರಮಿಗಳೂ ಹೌದು, ಪ್ರಾಮಾಣಿಕರೂ ಹೌದುಭರವಸೆ  ರೈತನ ಕಾಯಕ ಗುಣ ಧರ್ಮ, ಅದರಿಂದ ನಮಗೆ ನಿರಂತರ ಆಹಾರ ದೊರೆಯುತ್ತಿದೆ.

ನಮಗೆ ಸ್ವಾತಂತ್ರ್ಯ ಬಂದಾಗ ಹೊರ ದೇಶದಿಂದ ಆಹಾರ ಪದಾರ್ಥ ತರಲಾಗುತ್ತಿತ್ತು. ಈಗ 130 ಕೋಟಿ ಜನರಿಗೆ ಆಹಾರ ಉತ್ಪಾದನೆ ಮಾಡಲಾಗುತ್ತಿದೆ. ಕೃಷಿ ಬೆಳೆದಂತೆ ರೈತ ಬೆಳೆದಿಲ್ಲ. ರೈತ ಉತ್ಪಾದನೆ ಮಾಡುತ್ತಾನೆ. ಆದರೆ ಲಾಭ ಸಿಗುತ್ತಿಲ್ಲ  ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

13 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

22 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

22 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago