Advertisement
MIRROR FOCUS

ಒಣ ಮೇವು ಹುಲ್ಲಿಗೆ ಹೆಚ್ಚಿದ ಬೇಡಿಕೆ | ದುಪ್ಪಟ್ಟು ದರದಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಮಾರಾಟ…! | ಮುಂದಿನ ದಿನಗಳಲ್ಲಿ ಮೇವಿಗೂ ಕಾಡಲಿದೆ ಅಭಾವ

Share

ಬರಗಾಲ(Drought) ಬಂದ್ರೆ ಜನ- ಜಾನುವಾರು, ಕಾಡು ಪ್ರಾಣಿ ಪಕ್ಷಿಗಳಿಂದ(Animal-Birds) ಹಿಡಿದು ಕ್ರಿಮಿ ಕೀಟಗಳಿಗೂ ತೊಂದರೆ ತಪ್ಪಿದ್ದಲ್ಲ. ಎಲ್ಲೆಲ್ಲೂ ನೀರು ಆಹಾರಕ್ಕಾಗಿ(Water-Food) ಪರದಾಡುವ ಪರಿಸ್ಥಿತಿ ಬಂದೊದಗುತ್ತದೆ. ಮಳೆಯ ಕೊರತೆಯಿಂದ(Less rain) ಈ ಬಾರಿ ಜಾನುವಾರುಗಳ(Cattle) ಮೇವಿಗೂ(Fodder) ಸಂಕಷ್ಟಪಡುವಂತಾಗಿದೆ. ಇದರಿಂದ ಮೇವಿಗೂ ಹೆಚ್ಚಿನ ಬೇಡಿಕೆ ಬಂದಿದೆ. ಇನ್ನೇನು ಮೇವು ಮಾರಾಟ ಮಾಡುವ ರೈತರಿಗೆ (Farmers) ಸದ್ಯ ಸುಗ್ಗಿ ಕಾಲ ಎನ್ನಬಹುದು. ಮಹಾರಾಷ್ಟ್ರದಿಂದ(Maharastra) ಬೆಳಗಾವಿಗೆ(Belagavi) ಬಂದು ಮೇವು  ಕೊಂಡೊಯ್ಯುವವರ ಸಂಖ್ಯೆಯೂ ಹೆಚ್ಚಾಗಿದೆ.

Advertisement
Advertisement
Advertisement
Advertisement

ಮೇವಿಗೆ ಅಭಾವ : ದನಕರುಗಳಿಗೆ ಜೋಳದ ದಂಟು, ತೊಗರಿ ಹೊಟ್ಟು, ಹುರುಳಿ ಬಳ್ಳಿ, ಶೇಂಗಾ ಹೊಟ್ಟನ್ನು ಮೇವಾಗಿ ಬಳಕೆ ಮಾಡಲಾಗುತ್ತದೆ. ಮಳೆ ಕಡಿಮೆಯಾದ ಪರಿಣಾಮ ತೊಗರಿ ಹೊಟ್ಟು ಹಾಗೂ ಜೋಳದ ದಂಟಿನ ಮೇವಿನ ಅಭಾವ ಉಂಟಾಗಿದೆ. ಹುರುಳಿ ಬಳ್ಳಿಯ ಹೊಟ್ಟು ಹಾಗೂ ಶೇಂಗಾ ಹೊಟ್ಟು ದುಬಾರಿಯಾಗಿದೆ. ತುಸು ಹೆಚ್ಚು ಬೆಲೆಯಾದರೂ ಜೋಳದ ದಂಟಿನ ಮೇವು ಖರೀದಿಗೆ ರೈತರು ಅಲೆದಾಡುತ್ತಿದ್ದಾರೆ.

Advertisement

ದುಪ್ಪಟ್ಟು ರೇಟ್: ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪ ವಿಭಾಗದ ಕಾಗವಾಡ ಹಾಗೂ ಅಥಣಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮಾತ್ರ ಜೋಳದ ಬೆಳೆ ಬೆಳೆಯಲಾಗುತ್ತದೆ. ಈ ವರ್ಷನೀರಿನ ಅಭಾವ ಹಿನ್ನೆಲೆ ಕಡಿಮೆ ಇಳುವರಿ ಬಂದಿದ್ದು ಮಹಾರಾಷ್ಟ್ರದಿಂದ ಬರುವ ರೈತರು ಇಲ್ಲಿನ ಮೇವಿನ ಹುಲ್ಲಿಗೆ 2000 ದಿಂದ 2500 ರೂಪಾಯಿ ನೀಡಿ ಖರೀದಿಸುತ್ತಿದ್ದಾರೆ. ಹಿಂದೆಲ್ಲ ಸಾವಿರದ ಗಡಿ ದಾಟೋದೆ ಕಷ್ಟ ಅಂತಿದ್ದ ಮೇವಿನ ದರ ಈ ಬಾರಿ ಡಬಲ್‌ ಆಗಿದೆ. ಇದು ಗಡಿನಾಡ ರೈತರಿಗೆ ಒಂದಿಷ್ಟು ಖುಷಿ ತಂದಿರುವುದು ಸುಳ್ಳಲ್ಲ.

ಕೇವಲ ಉತ್ತರದಲ್ಲಿ ಮಾತ್ರವಲ್ಲ, ರಾಜ್ಯದಾದ್ಯಂತ ಮೇವಿಗೆ ಈ ಬಾರಿ ಕೊರೆತೆ ಉಂಟಾಗುವ ಎಲ್ಲಾ ಲಕ್ಷಣಗಳಿವೆ. ಜಾನುವಾರಗಳನ್ನು ಈ ಬರಗಾಲದ ಸಮಯದಲ್ಲಿ ಸಾಕುವುದೇ ದೊಡ್ಡ ಸವಾಲಾಗಿದೆ. ನೀರಿಗೂ ಅಭಾವ ಉಂಟಾಗಲಿದೆ. ಸರ್ಕಾರ ಈ ನಿಟ್ಟಿನಲ್ಲಿ ಸರಿಯಾದ ಕ್ರಮ ಕೈಗೊಳ್ಳದಿದ್ದರೆ, ರೈತರು ಕಷ್ಟ ಪಡಬೇಕಾಗುತ್ತದೆ. ಜಾನುವಾರು ಸಾಕುವ ಅಲ್ಪ ಸ್ವಲ್ಪ ಮಂದಿಯೂ ಇದನ್ನು ಕೈಬಿಡುವ ಯೋಚನೆಯನ್ನು ಮಾಡಬಹುದು. ದನ, ಕರುಗಳು ಕಟುಕರ ಕೈ ಸೇರುವುದರಲ್ಲಿ ಸಂದೇಹವಿಲ್ಲ.

Advertisement

– ಅಂತರ್ಜಾಲ ಮಾಹಿತಿ

Due to the lack of rain (Less rain) this time, cattle fodder (Fodder) is suffering. Due to this, the demand for fodder has also increased. For the farmers who sell fodder, it is harvest season. The number of people coming to Belagavi from Maharashtra to take fodder has also increased.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

7 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago